Webdunia - Bharat's app for daily news and videos

Install App

ಅಫ್ಘಾನ್ ಸೇನೆಯಿಂದ ಏರ್ಸ್ಟ್ರೈಕ್, 200ಕ್ಕೂ ಅಧಿಕ ತಾಲಿಬಾನಿಯರು ಹತ!

Webdunia
ಭಾನುವಾರ, 8 ಆಗಸ್ಟ್ 2021 (13:54 IST)
ಕಬೂಲ್(ಆ.08): ಅಫ್ಘಾನ್ ವಾಯುಪಡೆಯು ಶೆಬರ್ಜೆನ್ ನಗರದಲ್ಲಿ ಏರ್ಸ್ಟ್ರೈಕ್ ನಡೆಸಿ ತಾಲಿಬಾನ್ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಿಂದ ತಾಲಿಬಾನಿಯರಿಗೆ ಅಪಾಯ ಹಾನಿಯುಂಟಾಗಿದೆ ಎಂದು ಅಫ್ಘಾನ್ ರಕ್ಷಣಾ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.ಈ ದಾಳಿಯಲ್ಲಿ 200 ಕ್ಕೂ ಹೆಚ್ಚು ತಾಲಿಬಾನ್ ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯದ ಅಧಿಕಾರಿ ಫವಾದ್ ಅಮನ್ ಟ್ವೀಟ್ ಈ ಬಗ್ಗೆ ಮಾತನಾಡಿದ್ದು, "ಶನಿವಾರ ಸಂಜೆ ತಾಲಿಬಾನಿಯರ ಶಿಬಿರಗಳ ಮೇಲೆ ವಾಯುದಾಳಿ ನಡೆಸಿದ್ದು, ಈ ದಾಳಿಯಲ್ಲಿ 200 ಕ್ಕೂ ಹೆಚ್ಚು ತಾಲಿಬಾನ್ ಉಗ್ರರನ್ನು ಶೆಬರ್ಜೆನ್ ನಗರದಲ್ಲಿ ಹತರಾಗಿದ್ದಾರೆ. ಈ ದಾಳಿಯಲ್ಲಿ ಶಸ್ತ್ರಾಸ್ತ್ರ, ಮದ್ದುಗುಂಡುಗಳಿದ್ದ ಶಿಬಿರದ ಮೇಲೆ ದಾಳಿ ನಡೆಸಿದ್ದು, ಉಗ್ರರ 100 ಕ್ಕೂ ಹೆಚ್ಚು ವಾಹನಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದ್ದಾರೆ.
ಬಿ -52 ಬಾಂಬರ್ ಶನಿವಾರ ಸಂಜೆ 6.30 ಕ್ಕೆ ಜವಾಜಾನ್ ಪ್ರಾಂತ್ಯದ ಶೆಬರ್ಜೆನ್ ಪಟ್ಟಣದಲ್ಲಿ ತಾಲಿಬಾನ್ ಕೂಟವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯದ ಅಧಿಕಾರಿಯೊಬ್ಬರು ಟ್ವೀಟ್ ಮಾಡಿದ್ದು "ಇಂದು ಸಂಜೆ 6: 30 ಕ್ಕೆ ಜವಾಜಾನ್ ಪ್ರಾಂತ್ಯದ ಶೆಬರ್ಗಾನ್ ನಗರದಲ್ಲಿ ತಾಲಿಬಾನ್ ಕೂಟವನ್ನು ಬಿ -52 ವಿಮಾನವು ಗುರಿಯಾಗಿಸಿಕೊಂಡಿದೆ. ಯುಎಸ್ ವಾಯುಪಡೆಯ ವೈಮಾನಿಕ ದಾಳಿಯ ಪರಿಣಾಮವಾಗಿ ಭಯೋತ್ಪಾದಕರಿಗೆ ಭಾರೀ ಹಾನಿಯಾಗಿದೆ' ಎಂದಿದ್ದಾರೆ.
ಈ ಹಿಂದೆ, ಗಜನಿ ಪ್ರಾಂತೀಯ ಕೇಂದ್ರದ ಹೊರವಲಯದಲ್ಲಿ ಪಾಕಿಸ್ತಾನದ ಭಯೋತ್ಪಾದಕನನ್ನು ಅಫ್ಘಾನ್ ಕಮಾಂಡೋ ಪಡೆ ಬಂಧಿಸಿತ್ತು. ಆತ ಭಯೋತ್ಪಾದಕ ಚಟುವಟಿಕೆ ಮತ್ತು ನಾಗರಿಕರನ್ನು ಕೊಲ್ಲುವುದರಲ್ಲಿ ಭಾಗಿಯಾಗಿದ್ದ ಎಂಬ ಆರೋಪ ಕೇಳಿ ಬಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments