Webdunia - Bharat's app for daily news and videos

Install App

ಮಾತುಕತೆ ಮಾಡಿ ಎಂದು ಭಾರತದ ಹಿಂದೆ ಇನ್ಮುಂದೆ ಅಲೆಯಲ್ಲ: ಪಾಕ್ ಆಕ್ರೋಶ

Webdunia
ಶುಕ್ರವಾರ, 14 ಜೂನ್ 2019 (09:31 IST)
ನವದೆಹಲಿ: ಶಾಂಘೈ ಶೃಂಗ ಸಭೆಯಲ್ಲಿ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲು ನಿರಾಕರಿಸಿರುವ ಭಾರತದ ಕ್ರಮದಿಂದ ಸಿಟ್ಟಿಗೆದ್ದಿರುವ ಪಾಕಿಸ್ತಾನ ಇನ್ಮುಂದೆ ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸೋಣ ಎಂದು ಅಲೆಯೋದಿಲ್ಲ ಎಂದಿದೆ.


ಕಿರ್ಗಿಸ್ತಾನದ ಬಿಷ್ಕೇಕ್ ನಲ್ಲಿ ನಡೆಯುತ್ತಿರುವ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಭಾರತದ ಪ್ರಧಾನಿ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈಗಾಗಲೇ ಇಲ್ಲಿಗೆ ಬಂದು ಸೇರಿದ್ದಾರೆ. ಈ ಶೃಂಗ ಸಭೆಗೂ ಮೊದಲು ಪಾಕ್ ಭಾರತದ ಬಳಿ ಶಾಂತಿ ಮಾತುಕತೆಗೆ ಆಹ್ವಾನ ನೀಡಿತ್ತು. ಆದರೆ ಭಾರತ ಇದನ್ನು ತಿರಸ್ಕರಿಸಿರುವುದು ಪಾಕ್ ಸಿಟ್ಟಿಗೆ ಕಾರಣವಾಗಿದೆ.

ಪ್ರತೀ ಬಾರಿ ಮಾತುಕತೆ ನಡೆಸಿದರೂ ಪಾಕ್ ಗಡಿಯಾಚೆಗಿನ ಭಯೋತ್ಪಾನೆ ಮಾತ್ರ ನಿಲ್ಲಿಸುವುದಿಲ್ಲವೆಂಬ ಕಾರಣಕ್ಕೆ ಭಾರತ ಇದೊಂದು ವ್ಯರ್ಥ ಮಾತುಕತೆ ಎಂಬ ತೀರ್ಮಾನಕ್ಕೆ ಬಂದಿದೆ. ಆದರೆ ಭಾರತದ ತೀರ್ಮಾನಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪಾಕ್ ವಿದೇಶಾಂಗ ಸಚಿವ ಮೊಹಮ್ಮದ್ ಖುರೇಷಿ ‘ಭಾರತ ಸರ್ಕಾರ ಇನ್ನೂ ಚುನಾವಣೆ ಗುಂಗಿನಿಂದ ಹೊರಬಂದಂತೆ ಕಾಣುತ್ತಿಲ್ಲ. ಆ ದೇಶದ ಪ್ರಧಾನಿಗೆ ನಮ್ಮ ವಾಯುನೆಲೆ ಮೂಲಕ ಕಿರ್ಗಿಸ್ತಾನಕ್ಕೆ ತೆರಳಲು ಒಪ್ಪಿಗೆ ನೀಡಿದ್ದೆವು. ಹಾಗಿದ್ದರೂ ಅವರು ಅದನ್ನು ಬಳಸಲಿಲ್ಲ. ಇದರ ಅರ್ಥವೇನು? ಅವರು ಇನ್ನೂ ಹಿಂದುತ್ವ ಗುಂಗಿನಲ್ಲಿದ್ದಾರೆ. ನಮ್ಮ ಜತೆ ಮಾತುಕತೆ ನಡೆಸಿದರೆ ತಮ್ಮ ಮತಬ್ಯಾಂಕ್ ಗೆ ತೊಂದರೆಯಾಗಬಹುದು ಎಂಬ ಗುಂಗಿನಲ್ಲಿದ್ದಾರೆ’ ಎಂದು ಖುರೇಷಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments