Webdunia - Bharat's app for daily news and videos

Install App

ಸರ್ಜಿಕಲ್ ಸ್ಟ್ರೈಕ್ ಮಾಡಿದ್ರೆ ತಕ್ಕ ಶಾಸ್ತಿ: ಭಾರತಕ್ಕೆ ಪಾಕ್ ಎಚ್ಚರಿಕೆ

Webdunia
ಶುಕ್ರವಾರ, 6 ಅಕ್ಟೋಬರ್ 2017 (19:07 IST)
ಪಾಕಿಸ್ತಾನದೊಳಗೆ ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸುವುದಾಗಲಿ ಅಥವಾ ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದಲ್ಲಿ ಇಸ್ಲಾಮಾಬಾದ್‌ನಿಂದ ಸಂಯಮವನ್ನು ನಿರೀಕ್ಷಿಸಬಾರದು. ದಾಳಿಗೆ ತಕ್ಕ ಉತ್ತರ ನೀಡುತ್ತೇವೆ ಎಂದು ಪಾಕಿಸ್ತಾನದ ರಾಯಭಾರಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. 
ಭಾರತದ ವಾಯು ಮುಖ್ಯಸ್ಥ ಮಾರ್ಷಲ್ ಬಿ. ಧನೊವಾ ಸಂಪೂರ್ಣ ಸ್ಪೆಕ್ಟ್ರಂ ಕಾರ್ಯಾಚರಣೆಗೆ ಸಿದ್ಧವಾಗಿದೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ವಿದೇಶಾಂಗ ಸಚಿವ ಖ್ವಾಜಾ ಆಸೀಫ್, ಪಾಕಿಸ್ತಾನ ತನ್ನ ನೆರೆಹೊರೆಯ ರಾಷ್ಟ್ರಗಳೊಂದಿಗೆ ಶಾಂತಿ ಮತ್ತು ಸಾಮರಸ್ಯದಿಂದ ಬದುಕಲು ಬಯಸುತ್ತದೆ ಎಂದು ತಿಳಿಸಿದ್ದಾರೆ.
 
ಒಂದು ವೇಳೆ, ಭಾರತ ಪಾಕಿಸ್ತಾನ ಪಾಕಿಸ್ತಾನದೊಳಗೆ ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸುವುದಾಗಲಿ ಅಥವಾ ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದಲ್ಲಿ ಇಸ್ಲಾಮಾಬಾದ್‌ನಿಂದ ಸಂಯಮವನ್ನು ನಿರೀಕ್ಷಿಸಬಾರದು ಎಂದು ಎಚ್ಚರಿಸಿದ್ದಾರೆ.
 
ವಾಷಿಂಗ್ಟನ್ ಮೂಲದ ಚಿಂತಕರ ತಂಡವಾದ ಯು.ಎಸ್ ಇನ್ಸ್ಟಿಟ್ಯೂಟ್ ಆಫ್ ಪೀಸ್‌ ಸಭೆಯಲ್ಲಿ ಮಾತನಾಡಿದ ಆಸಿಫ್, ಪ್ರಸ್ತುತ ಭಾರತದೊಂದಿಗಿನ ಸಂಬಂಧವು ಅತ್ಯಂತ ಕ್ಷೀಣ ಮಟ್ಟದಲ್ಲಿದೆ" ಎಂದು ಹೇಳಿದರು.
 
ಸಂಬಂಧವನ್ನು ಸುಧಾರಿಸಲು ಮಾಡಿದ ಪಾಕಿಸ್ತಾನದ ಪ್ರಯತ್ನಗಳಿಗೆ ಭಾರತ ಸೂಕ್ತವಾಗಿ ಸ್ಪಂದಿಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
 
ಕಾಶ್ಮೀರದಲ್ಲಿ ನಡೆಯುತ್ತಿರುವ ಘಟನೆಗಳು ಉಭಯ ದೇಶಗಳ ಮಾತುಕತೆಗೆ ಪ್ರಮುಖ ಅಡ್ಡಿಯಾಗಿವೆ ಎಂದು ಪಾಕಿಸ್ತಾನದ ವಿದೇಶಾಂಗ ಖಾತೆ ಸಚಿವ ಖ್ವಾಜಾ ಆಸೀಫ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments