Webdunia - Bharat's app for daily news and videos

Install App

ಸರ್ಜಿಕಲ್ ಸ್ಟ್ರೈಕ್ ಮಾಡಿದ್ರೆ ತಕ್ಕ ಶಾಸ್ತಿ: ಭಾರತಕ್ಕೆ ಪಾಕ್ ಎಚ್ಚರಿಕೆ

Webdunia
ಶುಕ್ರವಾರ, 6 ಅಕ್ಟೋಬರ್ 2017 (19:07 IST)
ಪಾಕಿಸ್ತಾನದೊಳಗೆ ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸುವುದಾಗಲಿ ಅಥವಾ ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದಲ್ಲಿ ಇಸ್ಲಾಮಾಬಾದ್‌ನಿಂದ ಸಂಯಮವನ್ನು ನಿರೀಕ್ಷಿಸಬಾರದು. ದಾಳಿಗೆ ತಕ್ಕ ಉತ್ತರ ನೀಡುತ್ತೇವೆ ಎಂದು ಪಾಕಿಸ್ತಾನದ ರಾಯಭಾರಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. 
ಭಾರತದ ವಾಯು ಮುಖ್ಯಸ್ಥ ಮಾರ್ಷಲ್ ಬಿ. ಧನೊವಾ ಸಂಪೂರ್ಣ ಸ್ಪೆಕ್ಟ್ರಂ ಕಾರ್ಯಾಚರಣೆಗೆ ಸಿದ್ಧವಾಗಿದೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ವಿದೇಶಾಂಗ ಸಚಿವ ಖ್ವಾಜಾ ಆಸೀಫ್, ಪಾಕಿಸ್ತಾನ ತನ್ನ ನೆರೆಹೊರೆಯ ರಾಷ್ಟ್ರಗಳೊಂದಿಗೆ ಶಾಂತಿ ಮತ್ತು ಸಾಮರಸ್ಯದಿಂದ ಬದುಕಲು ಬಯಸುತ್ತದೆ ಎಂದು ತಿಳಿಸಿದ್ದಾರೆ.
 
ಒಂದು ವೇಳೆ, ಭಾರತ ಪಾಕಿಸ್ತಾನ ಪಾಕಿಸ್ತಾನದೊಳಗೆ ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸುವುದಾಗಲಿ ಅಥವಾ ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದಲ್ಲಿ ಇಸ್ಲಾಮಾಬಾದ್‌ನಿಂದ ಸಂಯಮವನ್ನು ನಿರೀಕ್ಷಿಸಬಾರದು ಎಂದು ಎಚ್ಚರಿಸಿದ್ದಾರೆ.
 
ವಾಷಿಂಗ್ಟನ್ ಮೂಲದ ಚಿಂತಕರ ತಂಡವಾದ ಯು.ಎಸ್ ಇನ್ಸ್ಟಿಟ್ಯೂಟ್ ಆಫ್ ಪೀಸ್‌ ಸಭೆಯಲ್ಲಿ ಮಾತನಾಡಿದ ಆಸಿಫ್, ಪ್ರಸ್ತುತ ಭಾರತದೊಂದಿಗಿನ ಸಂಬಂಧವು ಅತ್ಯಂತ ಕ್ಷೀಣ ಮಟ್ಟದಲ್ಲಿದೆ" ಎಂದು ಹೇಳಿದರು.
 
ಸಂಬಂಧವನ್ನು ಸುಧಾರಿಸಲು ಮಾಡಿದ ಪಾಕಿಸ್ತಾನದ ಪ್ರಯತ್ನಗಳಿಗೆ ಭಾರತ ಸೂಕ್ತವಾಗಿ ಸ್ಪಂದಿಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
 
ಕಾಶ್ಮೀರದಲ್ಲಿ ನಡೆಯುತ್ತಿರುವ ಘಟನೆಗಳು ಉಭಯ ದೇಶಗಳ ಮಾತುಕತೆಗೆ ಪ್ರಮುಖ ಅಡ್ಡಿಯಾಗಿವೆ ಎಂದು ಪಾಕಿಸ್ತಾನದ ವಿದೇಶಾಂಗ ಖಾತೆ ಸಚಿವ ಖ್ವಾಜಾ ಆಸೀಫ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments