India Pakistan: ಸಿಂಧೂ ನದಿ ನಿಲ್ಲಿಸಿದ್ರೆ ನಿಮ್ಮ ಉಸಿರನ್ನೂ ನಿಲ್ಲಿಸ್ತೇವೆ ಎಂದು ಎಚ್ಚರಿಕೆ ಕೊಟ್ಟ ಪಾಕಿಸ್ತಾನ ಸೇನಾ ವಕ್ತಾರ

Krishnaveni K
ಶುಕ್ರವಾರ, 23 ಮೇ 2025 (09:09 IST)
Photo Credit: X
ಇಸ್ಲಾಮಾಬಾದ್: ಸಿಂಧೂ ನದಿ ನೀರು ನಿಲ್ಲಿಸಿದ್ರೆ ನಿಮ್ಮ ಉಸಿರನ್ನೂ ನಿಲ್ಲಿಸಬೇಕಾಗುತ್ತದೆ ಎಂದು ಪಾಕಿಸ್ತಾನ ಸೇನಾ ವಕ್ತಾರರ ಅಹ್ಮದ್ ಷರೀಫ್ ಬೆದರಿಕೆ ಹಾಕಿದ್ದಾನೆ.

ನಿನ್ನೆಯಷ್ಟೇ ಪ್ರಧಾನಿ ಮೋದಿ ರಾಜಸ್ಥಾನದ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಪಾಕಿಸ್ತಾನಕ್ಕೆ ನಮ್ಮ ಸಿಂಧೂ ನದಿಯ ಹನಿ ನೀರೂ ಹರಿಯಲು ಬಿಡಲ್ಲ ಎಂದಿದ್ದರು. ಅವರ ಮಾತಿಗೆ ಪಾಕ್ ಸೇನಾ ವಕ್ತಾರ ಕೌಂಟರ್ ಕೊಟ್ಟಿದ್ದಾನೆ.

ಪಾಕಿಸ್ತಾನದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಅಹ್ಮದ್ ಷರೀಫ್ ಸಿಂಧೂ ನದಿ ಒಪ್ಪಂದ ರದ್ದಾಗಿರುವುದರ ಬಗ್ಗೆ ಪ್ರಸ್ತಾಪಿಸಿದ್ದಾನೆ. ಈ ವೇಳೆ ಭಾರತವೇನಾದರೂ ಸಿಂಧೂ ನದಿ ನಿಲ್ಲಿಸಿದರೆ ನಾವು ಅವರ ಉಸಿರು ಕಟ್ಟಿ ಹಾಕಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ.

ಇದಕ್ಕೆ ಮೊದಲು ಉಗ್ರ ಹಫೀಜ್ ಸಯೀದ್ ಕೂಡಾ ಇದೇ ಮಾತನ್ನು ಹೇಳಿದ್ದ. ಹೀಗಾಗಿ ಪಾಕಿಸ್ತಾನದಲ್ಲಿ ಉಗ್ರರು ಮತ್ತು ಸೇನಾ ವಕ್ತಾರರ ಹೇಳಿಕೆ ಎರಡೂ ಒಂದೇ ರೀತಿಯದ್ದಾಗಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಿತ್ತು. ಭಯೋತ್ಪಾದನೆ ಸಂಪೂರ್ಣವಾಗಿ ನಿಲ್ಲುವವರೆಗೂ ನೀರು ಹರಿಸಲ್ಲ ಎಂದು ಭಾರತ ಈಗಾಗಲೇ ಸ್ಪಷ್ಟ ಸಂದೇಶ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆ ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿದ್ದರಾಮಯ್ಯ

ಸಿಎಂ, ಡಿಸಿಎಂ ಒಗ್ಗಟ್ಟು ನೋಡಿ ಖುಷಿಯಾಯಿತು: ಸಂತೋಷ್ ಲಾಡ್

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments