ಸ್ವತಃ ಗತಿಯಿಲ್ಲದಿದ್ದರೂ ಮಾಲ್ಡೀವ್ಸ್ ಗೆ ಸಹಾಯ ಮಾಡುತ್ತೇವೆ ಎಂದ ಪಾಕ್

Krishnaveni K
ಸೋಮವಾರ, 5 ಫೆಬ್ರವರಿ 2024 (10:15 IST)
ಇಸ್ಲಾಮಾಬಾದ್: ತನಗೇ ಗತಿಯಿಲ್ಲದಿದ್ದರೂ ಭಾರತದೊಂದಿಗೆ ಸಂಬಂಧ ಹಳಸಿಕೊಂಡಿರುವ ಮಾಲ್ಡೀವ್ಸ್ ಗೆ ತಾನು ಸಹಾಯ ಮಾಡುವುದಾಗಿ ಪಾಕಿಸ್ತಾನ ಘೋಷಿಸಿದೆ.

ಇತ್ತೀಚೆಗೆ ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಯನ್ನು ಟೀಕಿಸಿದ ಬಳಿಕ ಭಾರತ-ಮಾಲ್ಡೀವ್ಸ್ ನಡುವಿನ ಸಂಬಂಧ ಹಳಸಿತ್ತು. ಅಲ್ಲಿನ ಸಚಿವರಿಬ್ಬರು ಭಾರತ ಮತ್ತು ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರಿಂದ ಸಿಟ್ಟಿಗೆದ್ದ ಭಾರತೀಯರು ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ನಡೆಸಿದ್ದರು. ಪರಿಣಾಮ ಪ್ರವಾಸೋದ್ಯಮವನ್ನೇ ನಂಬಿಕೊಂಡಿದ್ದ ಮಾಲ್ಡೀವ್ಸ್ ಗೆ ಭಾರತೀಯ ಪ್ರವಾಸಿಗರು ಪ್ರವಾಸ ಕ್ಯಾನ್ಸಲ್ ಮಾಡಿ ತೀವ್ರ ನಷ್ಟ ತಂದಿದ್ದರು. ಇದಾದ ಬಳಿಕ ಮಾಲ್ಡೀವ್ಸ್ ಚೀನಾ ಜೊತೆ ಕೈ ಜೋಡಿಸಿತ್ತು.

ಉಭಯ ದೇಶಗಳ ನಡುವಿನ ಸಂಬಂಧ ಹಳಸಿದ ಬೆನ್ನಲ್ಲೇ ಭಾರತ ಸರ್ಕಾರ ಮಾಲ್ಡೀವ್ಸ್ ಗೆ ನೀಡುತ್ತಿದ್ದ ಸಹಾಯ ಧನ ಕಡಿತಗೊಳಿಸಿದೆ. ಕಳೆದ ಸಾಲಿಗೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.22 ರಷ್ಟು ಸಹಾಯಧನ ಕಡಿತ ಮಾಡಿದೆ.

ಪಾಕಿಸ್ತಾನ ನೆರವಿನ ಘೋಷಣೆ
ಭಾರತ ಸರ್ಕಾರದಿಂದ ನೆರವು ಕಡಿತವಾಗುತ್ತಿದ್ದಂತೇ ಇತ್ತ ಪಾಕಿಸ್ತಾನ ತಾನು ಮಾಲ್ಡೀವ್ಸ್ ಸಹಾಯಕ್ಕೆ ಸಿದ್ಧ ಎಂದು ಘೋಷಿಸಿದೆ. ಸ್ವತಃ ಪಾಕಿಸ್ತಾನವೇ ಆರ್ಥಿಕ ಸಂಕಷ್ಟದಲ್ಲಿದ್ದು, ಚೀನಾದಂತಹ ದೈತ್ಯ ರಾಷ್ಟ್ರಗಳಿಂದ ಹಣಕ್ಕಾಗಿ ಬೇಡಿಕೊಳ್ಳುವ ಪರಿಸ್ಥಿತಿಯಿದೆ. ಈ ನಡುವೆ ಭಾರತದ ಜೊತೆ ಸಂಬಂಧ ಹಳಸಿದ ಬೆನ್ನಲ್ಲೇ ಮಾಲ್ಡೀವ್ಸ್ ಗೆ ಸಹಾಯ ಮಾಡುವ ಘೋಷಣೆ ಮಾಡಿರುವುದು ಹಾಸ್ಯಾಸ್ಪದವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು

ಇಂಡಿಗೋ ವಿಮಾನ ಸೇವೆಯಲ್ಲಿ ಭಾರೀ ವ್ಯತ್ಯಯ: ಸಮಸ್ಯೆ ಗಂಭೀರವಾದ ಬೆನ್ನಲ್ಲೇ ಡಿಜಿಸಿಎ ಯೂ ಟರ್ನ್‌

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments