India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Krishnaveni K
ಶುಕ್ರವಾರ, 16 ಮೇ 2025 (08:52 IST)
ನವದೆಹಲಿ: ಒಂದೆಡೆ ಕದನದಿಂದಾಗಿ ಭಾರೀ ನಷ್ಟ, ಇನ್ನೊಂದೆಡೆ ಸಿಂಧೂ ನದಿ ನೀರಿಲ್ಲದೇ ಬವಣೆ. ಇದರಿಂದ ಬೇಸತ್ತಿರುವ ಪಾಕಿಸ್ತಾನ ಈಗ ಭಾರತಕ್ಕೆ ಮಾತುಕತೆಗೆ ಆಹ್ವಾನ ನೀಡಿದೆ.

ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ಭಾರತ ಏರ್ ಸ್ಟ್ರೈಕ್ ನಡೆಸಿತ್ತು. ಇದಕ್ಕೆ ಪಾಕಿಸ್ತಾನ ಪ್ರತೀಕಾರ ತೀರಿಸಲು ಮುಂದಾಗಿತ್ತು. ನಮ್ಮ ಪ್ರತಿ ರಕ್ತ ಹನಿಗೂ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಕೊಚ್ಚಿಕೊಂಡಿದ್ದರು.

ಭಾರತದ ದಾಳಿಯಿಂದ ಅನಾಹುತವಾಗುತ್ತಿದ್ದಂತೇ ಕದನ ವಿರಾಮಕ್ಕೆ ಮೊರೆಯಿಟ್ಟರು. ಕದನ ವಿರಾಮವಾಗುತ್ತಿದ್ದಂತೇ ನಾವೇ ಗೆದ್ದೆವೆಂದು ಬೀಗಿಕೊಂಡರು. ಆದರೆ ಕದನ ವಿರಾಮ ಘೋಷಿಸಿದರೂ ಭಾರತೀಯ ಸೇನೆ ಉಗ್ರರ ಬೇಟೆ ನಡೆಸುತ್ತಿರುವುದು ಮತ್ತು ಸಿಂಧೂ ನದಿ ಒಪ್ಪಂದ ಪುನಸ್ಥಾಪಿಸದಿರುವುದು ಪಾಕ್ ಚಿಂತೆಗೆ ಕಾರಣವಾಗಿದೆ.

ಸಿಂಧೂ ನದಿ ನೀರು ಹಂಚಿಕೆ ಮಾಡುವಂತೆ ಅಂಗಲಾಚುತ್ತಿರುವ ಪಾಕಿಸ್ತಾನ ಈಗ ಶಾಂತಿ ಮಾತುಕತೆಗೂ ಆಹ್ವಾನ ನೀಡಿದೆ. ಶಾಂತಿಗಾಗಿ ನಾವು ಭಾರತದ ಜೊತೆ ಮಾತುಕತೆಗೆ ಸಿದ್ಧವಿದ್ದೇವೆ. ಶಾಂತಿಗಾಗಿ ಷರತ್ತುಗಳು ಕಾಶ್ಮೀರ ಸಮಸ್ಯೆಯನ್ನೂ ಒಳಗೊಂಡಿರುತ್ತದೆ. ಆದರೆ ಪ್ರಧಾನಿ ಮೋದಿ ಈಗಾಗಲೇ ಮಾತುಕತೆ ಎನ್ನುವುದಿದ್ದರೆ ಅದು ಉಗ್ರರ ನಿಗ್ರಹದ ಬಗ್ಗೆ ಮಾತ್ರ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments