Webdunia - Bharat's app for daily news and videos

Install App

ಕಾನೂನುಬಾಹಿರ ದೇಣಿಗೆ ಸಂಗ್ರಹ: ಹಫೀಜ್ ಸಯೀದ್ ವಿರುದ್ಧ ಕ್ರಮಕ್ಕೆ ಪಾಕ್ ಸರ್ಕಾರ ಆದೇಶ

Webdunia
ಶುಕ್ರವಾರ, 29 ಜುಲೈ 2016 (19:18 IST)
ಕಳೆದ 2008ರಲ್ಲಿ ಮುಂಬೈ ದಾಳಿಗೆ ದೇಣಿಗೆ ಸಂಗ್ರಹಿಸಿರುವ ಬಗ್ಗೆ ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಸರಕಾರ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದೆ. 
 
ಫಲಾಹ್ -ಎ-ಇನ್‍‌ಸಾಯತ್ ಫೌಂಡೇಶನ್ ಮೂಲಕ ಕಾನೂನುಬಾಹಿರವಾಗಿ ಧರ್ಮಾರ್ಥ ಕಾರ್ಯಗಳ ನೆಪದಲ್ಲಿ ಹಫೀಜ್ ಸಯೀದ್ ದೇಣಿಗೆ ಸಂಗ್ರಹಿಸಿರುವ ಬಗ್ಗೆ ತನಿಖೆ ನಡೆಸುವಂತೆ ಪಾಕಿಸ್ತಾನದ ಗೃಹ ಸಚಿವಾಲಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದೆ. 
 
166 ಮಂದಿ ಸಾವನ್ನಪ್ಪಿದ ಮುಂಬೈ ಉಗ್ರರ ದಾಳಿಯ ಮಾಸ್ಟರ್‌ಮೈಂಡ್ ಎಂದು ಕುಖ್ಯಾತಿ ಪಡೆದಿರುವ ಸಯೀದ್, ವಿಶ್ವಸಂಸ್ಥೆಯ ಉಗ್ರಗಾಮಿಗಳ ಪಟ್ಟಿಯಲ್ಲಿ ಕೂಡಾ ಸ್ಥಾನ ಪಡೆದಿದ್ದಾನೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. 
 
ಪಾಕಿಸ್ತಾನದ ಕಾನೂನಿಗೆ ವಿರುದ್ಧವಾಗಿ ಕೆಲವು ಸಂಘಟನೆಗಳು ಕಾನೂನುಬಾಹಿರವಾಗಿ ದೇಣಿಗೆ ಸಂಗ್ರಹಿಸುತ್ತಿರುವದು ಬಹಿರಂಗವಾಗಿದ್ದರಿಂದ ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಆದೇಶ ನೀಡಲಾಗಿದೆ.
 
ಹಪೀಜ್ ಸಯೀದ್ ನೇತೃತ್ವದ ಜಮಾತ್ ಉದ್ ದಾವಾ ಸಂಸ್ಥೆಯ ಸದಸ್ಯರು ರಮಜಾನ್ ಹಬ್ಬದ ಸಂದರ್ಭದಲ್ಲಿ ಧರ್ಮಾರ್ಥ ಕಾರ್ಯಗಳಿಗಾಗಿ ದೇಣಿಗೆ ನೀಡುವಂತೆ ಜನತೆಗೆ ಆಹ್ವಾನ ನೀಡಿ ಭಿತ್ತಿಪತ್ರಗಳನ್ನು ಹಂಚಿದ್ದರು ಎಂದು ಡಾನ್ ವರದಿ ಮಾಡಿದೆ. 
 
ಪಂಜಾಬ್ ಸರಕಾರ ಯಾವುದೇ ಪ್ರಮುಖ ಕಾರಣವಿಲ್ಲದೇ ದೇಣಿಗೆ ಸಂಗ್ರಹಿಸುವ ಧಾರ್ಮಿಕ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿತ್ತು. ಆರಂಭದಲ್ಲಿಯೇ ಇಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬಹುದಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments