Webdunia - Bharat's app for daily news and videos

Install App

ಕಾನೂನುಬಾಹಿರ ದೇಣಿಗೆ ಸಂಗ್ರಹ: ಹಫೀಜ್ ಸಯೀದ್ ವಿರುದ್ಧ ಕ್ರಮಕ್ಕೆ ಪಾಕ್ ಸರ್ಕಾರ ಆದೇಶ

Webdunia
ಶುಕ್ರವಾರ, 29 ಜುಲೈ 2016 (19:18 IST)
ಕಳೆದ 2008ರಲ್ಲಿ ಮುಂಬೈ ದಾಳಿಗೆ ದೇಣಿಗೆ ಸಂಗ್ರಹಿಸಿರುವ ಬಗ್ಗೆ ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಸರಕಾರ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದೆ. 
 
ಫಲಾಹ್ -ಎ-ಇನ್‍‌ಸಾಯತ್ ಫೌಂಡೇಶನ್ ಮೂಲಕ ಕಾನೂನುಬಾಹಿರವಾಗಿ ಧರ್ಮಾರ್ಥ ಕಾರ್ಯಗಳ ನೆಪದಲ್ಲಿ ಹಫೀಜ್ ಸಯೀದ್ ದೇಣಿಗೆ ಸಂಗ್ರಹಿಸಿರುವ ಬಗ್ಗೆ ತನಿಖೆ ನಡೆಸುವಂತೆ ಪಾಕಿಸ್ತಾನದ ಗೃಹ ಸಚಿವಾಲಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದೆ. 
 
166 ಮಂದಿ ಸಾವನ್ನಪ್ಪಿದ ಮುಂಬೈ ಉಗ್ರರ ದಾಳಿಯ ಮಾಸ್ಟರ್‌ಮೈಂಡ್ ಎಂದು ಕುಖ್ಯಾತಿ ಪಡೆದಿರುವ ಸಯೀದ್, ವಿಶ್ವಸಂಸ್ಥೆಯ ಉಗ್ರಗಾಮಿಗಳ ಪಟ್ಟಿಯಲ್ಲಿ ಕೂಡಾ ಸ್ಥಾನ ಪಡೆದಿದ್ದಾನೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. 
 
ಪಾಕಿಸ್ತಾನದ ಕಾನೂನಿಗೆ ವಿರುದ್ಧವಾಗಿ ಕೆಲವು ಸಂಘಟನೆಗಳು ಕಾನೂನುಬಾಹಿರವಾಗಿ ದೇಣಿಗೆ ಸಂಗ್ರಹಿಸುತ್ತಿರುವದು ಬಹಿರಂಗವಾಗಿದ್ದರಿಂದ ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಆದೇಶ ನೀಡಲಾಗಿದೆ.
 
ಹಪೀಜ್ ಸಯೀದ್ ನೇತೃತ್ವದ ಜಮಾತ್ ಉದ್ ದಾವಾ ಸಂಸ್ಥೆಯ ಸದಸ್ಯರು ರಮಜಾನ್ ಹಬ್ಬದ ಸಂದರ್ಭದಲ್ಲಿ ಧರ್ಮಾರ್ಥ ಕಾರ್ಯಗಳಿಗಾಗಿ ದೇಣಿಗೆ ನೀಡುವಂತೆ ಜನತೆಗೆ ಆಹ್ವಾನ ನೀಡಿ ಭಿತ್ತಿಪತ್ರಗಳನ್ನು ಹಂಚಿದ್ದರು ಎಂದು ಡಾನ್ ವರದಿ ಮಾಡಿದೆ. 
 
ಪಂಜಾಬ್ ಸರಕಾರ ಯಾವುದೇ ಪ್ರಮುಖ ಕಾರಣವಿಲ್ಲದೇ ದೇಣಿಗೆ ಸಂಗ್ರಹಿಸುವ ಧಾರ್ಮಿಕ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿತ್ತು. ಆರಂಭದಲ್ಲಿಯೇ ಇಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬಹುದಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Haveri bus driver video: ಹಾವೇರಿಯಲ್ಲಿ ನಡು ರಸ್ತೆಯಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ ಬಸ್ ಚಾಲಕ

Karnataka Weather: ಈ ಮೂರು ಜಿಲ್ಲೆ ಬಿಟ್ಟು ಮಳೆಯಲ್ಲ ಇಂದು ಬೆಂಕಿ ಮಳೆ ಗ್ಯಾರಂಟಿ

World International Workers Day: ಮೇ ಡೇ ಶುರುವಾಗಿದ್ದು ಇದೇ ಕಾರಣಕ್ಕೆ

Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ

Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments