Webdunia - Bharat's app for daily news and videos

Install App

ಸುಷ್ಮಾ ಸ್ವರಾಜ್ ನೆರವಿನಿಂದ ನನ್ನ ಮಗುವಿನ ಹೃದಯ ಬಡಿಯುತ್ತಿದೆ: ಪಾಕ್ ತಂದೆಯ ಕೃತಜ್ನತೆ

Webdunia
ಮಂಗಳವಾರ, 18 ಜುಲೈ 2017 (17:49 IST)
ನವದೆಹಲಿ: ಪಾಕಿಸ್ಥಾನದ ನಾಲ್ಕು ತಿಂಗಳ ಮಗು ರೋಹಾನ್‌ ಗೆ ನೋಯ್ಡಾ ಆಸ್ಪತ್ರೆಯಲ್ಲಿ ಯಶಸ್ವೀ ಹೃದಯ ಶಸ್ತ್ರಚಿಕಿತ್ಸೆ ನರವೇರಿದೆ. ಈ ಹಿನ್ನಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕೃತಜ್ನತೆ ಸಲ್ಲಿಸಿರುವ ಮಗುವಿನ ತಂದೆ ಕಮಾಲ್ ಸಿದ್ದಿಕಿ ಇತರ ಪಾಕಿಸ್ತಾನಿಯರಿಗೂ ಭಾರತ ವೈದ್ಯಕೀಯ ವೀಸಾದ್ವಾರವನ್ನು ತೆರೆಯಬೇಕು ಎಂದು ವಿನಂತಿಸಿದ್ದಾರೆ.
 
ಮೆಡಂ ಸುಷ್ಮಾ ಸ್ವರಾಜ್ ಅವರು ವೈದ್ಯಕೀಯ ವೀಸಾ ನೀಡಿದ್ದರಿಂದ ನನ್ನ ಮಗ ಇಂದು ಜೀವಂತವಾಗಿದ್ದಾನೆ. ಅವನ ಹೃದಯ ಸ್ವಚ್ಛಂದವಾಗಿ ಬಡಿಯುತ್ತಿದೆ. ಹೀಗಾಗಿ ಕಾಯಿಲೆಯಿಂದ ಬಳಲುತ್ತಿರುವ ಪಾಕಿಸ್ತಾನದ ಮಂದಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಭಾರತ ತೆರದ ಬಾಗಿಲಾಗಲಿ ಎಂದು ತಿಳಿಸಿದ್ದಾರೆ.
 
ಪಾಕಿಸ್ಥಾನದ ನಾಲ್ಕು ತಿಂಗಳ ಮಗು ರೋಹಾನ್‌ ನನ್ನು ಜುಲೈ 12ರಂದು ನೋಯ್ಡಾದ ಜೇಪೀ ಆಸ್ಪತ್ರೆಗೆ ಹೃದಯ ಶಸ್ತ್ರಚಿಕಿತ್ಸೆಗಾಗಿ ಕರೆತರಲಾಗಿತ್ತು. ಡಾ. ರಾಜೇಶ್‌ ಶರ್ಮಾ ನೇತೃತ್ವದ ವೈದ್ಯರ ತಂಡದಿಂದ  ಜು.14ರಂದು ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ರೋಹಾನ್‌ಗೆ ಹೃದಯದಲ್ಲಿ ಒಂದು ತೂತು ಇತ್ತು. ಹಾಗಾಗಿ ಹೃದಯದ ಎಡಭಾಗದಲ್ಲಿರುವ ಅಯೋರ್ಟಾ ಬಲಭಾಗಕ್ಕೆ ಬರುತ್ತಿತ್ತು. ಹಾಗಾಗಿ ರೋಹಾನ್ ಗೆ ಉಸಿರಾಟದ ತೊಂದರೆ ಇತ್ತು ಮತ್ತು ನ್ಯೂಮೋನಿಯಾ ಕೂಡ ಬಾಧಿಸುತ್ತಿತ್ತು ಎಂದು ವೈದ್ಯರು ಹೇಳಿದ್ದು ಶಸ್ತ್ರ ಚಿಕಿತ್ಸೆಯ ಬಳಿಕ ರೋಹಾನ್ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿಸಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಬಿಹಾರ ಪೊಲೀಸರು ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ: ರಾಹುಲ್ ಗಾಂಧಿ

ಭಾರತ ಯುದ್ಧವನ್ನು ಬೆಂಬಲಿಸವುದಿಲ್ಲ, ಆದ್ರೆ ನಮ್ಮ ತಂಟೆಗೆ ಬಂದವರನ್ನು ಸುಮ್ಮನೇ ಬಿಡುವುದಿಲ್ಲ: ರಾಜನಾಥ ಸಿಂಗ್‌

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಮುಂದಿನ ಸುದ್ದಿ
Show comments