Webdunia - Bharat's app for daily news and videos

Install App

ಭಾರತೀಯ ಸೇನಾ ದಾಳಿ ಬಹಿರಂಗಪಡಿಸಿದ ಪಾಕ್ ಪೊಲೀಸ್ ಅಧಿಕಾರಿ: ನವಾಜ್‌ಗೆ ಮುಖಭಂಗ

Webdunia
ಬುಧವಾರ, 5 ಅಕ್ಟೋಬರ್ 2016 (19:34 IST)
ಪಾಕಿಸ್ತಾನ ಆಕ್ರಮಿತ ಕಾಶ್ಮಿರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ಭಾರತೀಯ ಸೇನಾಪಡೆ ಸೀಮಿತ ದಾಳಿ ನಡೆಸಿದೆ ಎನ್ನುವುದೆಲ್ಲಾ ಸುಳ್ಳಿನ ಕಂತೆ ಎಂದು ಹೇಳಿಕೆ ನೀಡಿದ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್‌ಗೆ ಪಾಕಿಸ್ತಾನದ ಪೊಲೀಸ್ ಅಧಿಕಾರಿಯೇ ಉತ್ತರ ನೀಡಿದ್ದಾರೆ. 
 
ಮಾಧ್ಯಮಗಳೊಂದಿಗೆ ಸಂದರ್ಶನ ನೀಡಿದ ಪಿಒಕೆಯ ಮೀರ್ಪುರ್ ರೇಂಜ್‌ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಲಾಮ್ ಅಕ್ಬರ್, ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯಲ್ಲಿ 12 ಉಗ್ರರು ಹತರಾಗಿದ್ದಾರೆ ಎಂದು ತಿಳಿಸಿದ್ದಾರೆ. 
 
ಭಾರತೀಯ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಆದರೆ, ಪ್ರಧಾನಿ ನವಾಜ್ ಷರೀಫ್ ಕೇವಲ ಇಬ್ಬರು ಸೈನಕರು ಹತರಾಗಿದ್ದಾರೆ ಎಂದು ಸಂಸತ್‌ಗೆ ಸುಳ್ಳು ಮಾಹಿತಿ ನೀಡಿರುವುದನ್ನು ಬಹಿರಂಗಗೊಳಿಸಿದ್ದಾರೆ. 
 
ಭಿಂಭರ್, ನೀಲಮ್‌ನಲ್ಲಿರುವ ದುದ್‌ನಿಯಾಲ್ ಪೂಂಚ್‌ನಲ್ಲಿರುವ ಹಜಿರಾ ಹಾಗೂ ಹತಿಯಾ ಬಾಲಾದಲ್ಲಿರುವ ಕಯಾನಿ ಪ್ರದೇಶದಲ್ಲಿ ಭಾರತೀಯ ಸೇನೆ ಸೆಪ್ಟೆಂಬರ್ 29 ರ ರಾತ್ರಿ ದಾಳಿ ನಡೆಸಿತ್ತು ಎಂದು ತಿಳಿಸಿದ್ದಾರೆ.
 
ಭಾರತೀಯ ಸೀಮಿತ ದಾಳಿ ನಡೆಸಿ ಉಗ್ರರನ್ನು ಹತ್ಯೆಗೈದು ಮರಳುತ್ತಿದ್ದಂತೆ ಪಾಕಿಸ್ತಾನದ ಸೇನೆ ಸಂಪೂರ್ಣ ಪ್ರದೇಶವನ್ನು ಹಿಡಿತಕ್ಕೆ ತೆಗೆದುಕೊಂಡು ಮೃತ ಉಗ್ರರ ದೇಹಗಳನ್ನು ತೆಗೆದುಕೊಂಡು ಹೋಗಿ ಗ್ರಾಮಗಳಲ್ಲಿ ಹೂತು ಹಾಕಿದೆ ಎಂದು ಮಾಹಿತಿ ನೀಡಿದ್ದಾರೆ. 
 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಲಾಮ್ ಅಕ್ಬರ್ ನೀಡಿದ ಹೇಳಿಕೆ ಮತ್ತು ಡಿಜಿಎಂಒ ರಣಬೀರ್ ಸಿಂಗ್ ನೀಡಿದ ಹೇಳಿಕೆಗೆ ಸಂಪೂರ್ಣವಾಗಿ ಸಾಮ್ಯತೆ ಕಂಡುಬಂದಿದೆ. 
 
ನಮ್ಮ ಪಾಕಿಸ್ತಾನಿ ಸೇನೆ ಉಗ್ರರಿಗೆ ನೆರವು ನೀಡಿ ಅವರಿಗೆ ವಾಸಿಸಲು ವ್ಯವಸ್ಥೆ ಮಾಡಿ ಭಾರತದ ಗಡಿ ದಾಟಲು ನೆರವಾಗುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಪಾಕಿಸ್ತಾನದ ಮಿರ್ಪುರ್ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಲಾಮ್ ಅಕ್ಬರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments