Webdunia - Bharat's app for daily news and videos

Install App

ಕಡಲ್ಗಳ್ಳರಿಂದ ರಕ್ಷಿಸಿದ ಭಾರತೀಯ ಸೇನೆಗೆ ಜೈಕಾರ ಹಾಕಿದ ಪಾಕಿಸ್ತಾನಿಯರು

Krishnaveni K
ಭಾನುವಾರ, 31 ಮಾರ್ಚ್ 2024 (13:54 IST)
Photo Courtesy: Twitter
ನವದೆಹಲಿ: ಸಾಮಾನ್ಯಾವಾಗಿ ಪಾಕಿಸ್ತಾನ ಸದಾ ತನ್ನ ನೆರೆಯ ರಾಷ್ಟ್ರ ಭಾರತದ ವಿರುದ್ಧ ಕತ್ತಿ ಮಸೆಯುತ್ತಲೇ ಇರುತ್ತದೆ. ಆದರೆ ಇದೀಗ ಭಾರತೀಯ ನೌಕಾಪಡೆಗೆ ಪಾಕಿಸ್ತಾನಿಯರು ಜೈಕಾರ ಹಾಕಿದ್ದಾರೆ.

ಕಳೆದ ವಾರ ಯೆಮನ್ ನ ಸೊಕೋತ್ರ ದ್ವೀಪದ ಸಮುದ್ರ ಭಾಗದಲ್ಲಿ ಕಡಲ್ಗಳ್ಳರು ಇರಾನ್ ನ ಮೀನುಗಾರಿಕಾ ದೋಣಿಯನ್ನು ವಶಪಡಿಸಿಕೊಂಡಿದ್ದರು. ಈ ದೋಣಿಯಲ್ಲಿ 23 ಪಾಕಿಸ್ತಾನಿಯರು ಸಿಲುಕಿಕೊಂಡಿದ್ದರು. ಇವರನ್ನು ಭಾರತೀಯ ನೌಕಾಸೇನೆಯ ಐಎನ್‍ ಎಸ್ ಸುಮೇಧಾ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದರು.

12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದ ನೌಕಾಪಡೆ ಎಲ್ಲಾ ಪಾಕಿಸ್ತಾನಿಯರ ಜೀವ ಉಳಿಸಿತ್ತು. ಇದಕ್ಕೆ ಪಾಕಿಸ್ತಾನಿಯರು ಕೃತಜ್ಞತೆ ಸಲ್ಲಿಸಿದ್ದಾರೆ. ದೋಣಿಯ ಮುಖ್ಯಸ್ಥ ಅಮೀರ್ ವಿಡಿಯೋ ಸಂದೇಶ ನೀಡಿ ತಮ್ಮ ಜೀವ ಉಳಿಸಿದ ಭಾರತೀಯ ನೌಕಾಸೇನೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ವಿಡಿಯೋ ಸಂದೇಶದಲ್ಲಿ ಸೊಮಾಲಿಯಾ ಕಡಲ್ಗಳ್ಳರಿಂದ ಭಾರತೀಯ ನೌಕಾಪಡೆ ನಮ್ಮನ್ನು ರಕ್ಷಿಸಿದೆ ಎಂದಿದ್ದು, ಕೊನೆಯಲ್ಲಿ ಎಲ್ಲರೂ ಭಾರತ ಜಿಂದಾಬಾದ್ ಎಂದಿದ್ದಾರೆ. ಇತ್ತೀಚೆಗೆ ಸೊಮಾಲಿಯಾ ಕಡಲ್ಗಳ್ಳರ ಹಾವಳಿ ಜೋರಾಗಿದೆ. ಸೊಮಾಲಿಯಾ, ಸಿರಿಯಾ ಮೊದಲಾದ ಭಾಗಗಳಲ್ಲಿ ಹಾದುಹೋಗುವ ಹಡಗುಗಳನ್ನು ಅಪಹರಿಸುವ ಅನೇಕ ಘಟನೆಗಳು ಕೇಳಿಬರುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments