Webdunia - Bharat's app for daily news and videos

Install App

ಪನಾಮಾ ಹಗರಣ: ಪಾಕ್ ಪ್ರಧಾನಿ ನವಾಜ್ ಷರೀಫ್‌ ವಿರುದ್ಧ ತನಿಖೆಗೆ ಆದೇಶ

Webdunia
ಗುರುವಾರ, 20 ಏಪ್ರಿಲ್ 2017 (15:23 IST)
ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ವಿದೇಶಗಳಲ್ಲಿ ಪನಾಮಾಗೇಟ್ ಪ್ರಕರಣದಲ್ಲಿ ಕಾನೂನುಬಾಹಿರವಾಗಿ ಹಣ ಹೂಡಿಕೆ ಮಾಡಿರುವ ಕುರಿತಂತೆ ಜಂಟಿ ತಂಡದಿಂದ  ತನಿಖೆ ನಡೆಸಿ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.
 
ನವಾಜ್ ಷರೀಫ್ ವಿರುದ್ಧ ನೇರ ಕ್ರಮಕೈಗೊಳ್ಳಲು ನಿರಾಕರಿಸಿ ತನಿಖೆಗೆ ಆದೇಶಿಸಿರುವುದು ಷರೀಫ್‌ ನಿಟ್ಟುಸಿರು ಬಿಡುವಂತಾಗಿದೆ.ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆಸಿಫ್ ಸಯೀದ್ ಖೋಸಾ ನೇತೃತ್ವದ ಐವರು ನ್ಯಾಯಾಧೀಶರ ನ್ಯಾಯಪೀಠ, ಷರೀಪ್ ವಿರುದ್ಧ ತನಿಖೆಗೆ ಆದೇಶ ನೀಡಿದೆ. 
 
ಸಾಗರೋತ್ತರ ಕಂಪೆನಿಗಳಲ್ಲಿ ಕಾನೂನುಬಾಹಿರವಾಗಿ ಹಣ ಹೂಡಿಕೆ ಮಾಡಿರುವ ಪ್ರಧಾನಿ ಷರೀಫ್ ಮತ್ತು ಕುಟುಂಬಕ್ಕೆ ಹತ್ತಿರವಿರುವ ಸಂಬಂಧಿಗಳನ್ನು ಹುದ್ದೆಗಳಿಂದ ವಜಾಗೊಳಿಸಬೇಕು ಎಂದು ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ ತೆಹರೀಕ್ ಪಕ್ಷ, ಅವಾಮಿ ಮುಸ್ಲಿಂ ಲೀಗ್ ಮುಖ್ಯಸ್ಥ ಶೇಖ್ ರಷೀದ್ ಅಹ್ಮದ್ ಒತ್ತಾಯಿಸಿದ್ದಾರೆ. 
 
ಏತನ್ಮಧ್ಯೆ, ಪ್ರಧಾನಿ ನವಾಜ್ ಷರೀಫ್ ಮತ್ತು ಅವರ ಪುತ್ರರು ಪ್ರಕರಣದ ವಿಚಾರಣೆಗಾಗಿ ತನಿಖಾ ತಂಡದ ಮುಂದೆ ವೈಯಕ್ತಿಕವಾಗಿ ಹಾಜರಾಗಬೇಕು. ತನಿಖಾ ತಂಡ ಎರಡು ತಿಂಗಳೊಳಗೆ ವರದಿ ಸಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ     
 
ಪನಾಮಾ ಪೇಪರ್ಸ್ ಹಗರಣ ಪಾಕ್ ಸರಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು ಉನ್ನತ ರಾಜಕಾರಣಿಗಳು, ಅಧಿಕಾರಿಗಳು ಭಾಗಿಯಾಗಿರುವುದು ಬಹಿರಂಗವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments