Webdunia - Bharat's app for daily news and videos

Install App

ರನ್‌ ವೇಯಲ್ಲೇ ಹೊತ್ತಿ ಉರಿದ ವಿಮಾನ,18 ಮಂದಿ ಸಾವು, ಪವಾಡಸದೃಶ ಫೈಲೆಟ್ ಪಾರು

Sampriya
ಬುಧವಾರ, 24 ಜುಲೈ 2024 (16:40 IST)
Photo Courtesy X
ನೇಪಾಳ: ರಾಜಧಾನಿ ಕಠ್ಮಂಡುವಿನಲ್ಲಿ ಟೇಕ್ ಆಫ್ ವೇಳೆ ವಿಮಾನ ನೆಲಕ್ಕೆ ಅಪ್ಪಳಿಸಿ ಹೊತ್ತಿ ಉರಿದ ಪರಿಣಾಮ 18 ಮಂದಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಇನ್ನೂ ಅದೃಷ್ಟವಶಾತ್ ವಿಮಾನದ ಪೈಲೆಟ್ ಈ ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಅಪಘಾತದಲ್ಲಿ ಬದುಕುಳಿದ ಫೈಲೆಟ್ ಅವರನ್ನು ಚಿಕಿತ್ಸೆಗಾಗಿ ಕಠ್ಮಂಡು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪರಿಸ್ಥಿತಿಯೂ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಏರ್‌ಪೋರ್ಟ್‌ನ ವಕ್ತಾರ, ವಿಮಾನ ನಿಲ್ದಾಣದಿಂದ ಟೇಕ್‌ ಆಫ್ ಆಗುವ ವೇಳೆ ವಿಮಾನ ರನ್‌ ವೇಯಲ್ಲೇ ಸ್ಕಿಡ್ ಆಗಿದೆ. ಈ ವೇಳೆ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು ವಿಮಾನ ಹೊತ್ತಿ ಉರಿದಿದೆ. ಇದರಿಂದ ಕ್ಯಾಬಿನ್‌ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿ ಸೇರಿದಂತೆ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಸದ್ಯ ಸಾಮಾಜಿಕ ಜಾಲತಾಣದಕಲ್ಲಿ, ನೇಪಾಳ ರಾಜಧಾನಿ ಕಠ್ಮಂಡು ನಗರದಲ್ಲಿ ಇರುವ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದಟ್ಟ ಹೊಗೆ ಆಗಸಕ್ಕೆ ಚಿಮ್ಮುತ್ತಿರುವ ವಿಡಿಯೋ ದೃಶ್ಯ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments