Webdunia - Bharat's app for daily news and videos

Install App

ರನ್‌ ವೇಯಲ್ಲೇ ಹೊತ್ತಿ ಉರಿದ ವಿಮಾನ,18 ಮಂದಿ ಸಾವು, ಪವಾಡಸದೃಶ ಫೈಲೆಟ್ ಪಾರು

Sampriya
ಬುಧವಾರ, 24 ಜುಲೈ 2024 (16:40 IST)
Photo Courtesy X
ನೇಪಾಳ: ರಾಜಧಾನಿ ಕಠ್ಮಂಡುವಿನಲ್ಲಿ ಟೇಕ್ ಆಫ್ ವೇಳೆ ವಿಮಾನ ನೆಲಕ್ಕೆ ಅಪ್ಪಳಿಸಿ ಹೊತ್ತಿ ಉರಿದ ಪರಿಣಾಮ 18 ಮಂದಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಇನ್ನೂ ಅದೃಷ್ಟವಶಾತ್ ವಿಮಾನದ ಪೈಲೆಟ್ ಈ ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಅಪಘಾತದಲ್ಲಿ ಬದುಕುಳಿದ ಫೈಲೆಟ್ ಅವರನ್ನು ಚಿಕಿತ್ಸೆಗಾಗಿ ಕಠ್ಮಂಡು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪರಿಸ್ಥಿತಿಯೂ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಏರ್‌ಪೋರ್ಟ್‌ನ ವಕ್ತಾರ, ವಿಮಾನ ನಿಲ್ದಾಣದಿಂದ ಟೇಕ್‌ ಆಫ್ ಆಗುವ ವೇಳೆ ವಿಮಾನ ರನ್‌ ವೇಯಲ್ಲೇ ಸ್ಕಿಡ್ ಆಗಿದೆ. ಈ ವೇಳೆ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು ವಿಮಾನ ಹೊತ್ತಿ ಉರಿದಿದೆ. ಇದರಿಂದ ಕ್ಯಾಬಿನ್‌ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿ ಸೇರಿದಂತೆ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಸದ್ಯ ಸಾಮಾಜಿಕ ಜಾಲತಾಣದಕಲ್ಲಿ, ನೇಪಾಳ ರಾಜಧಾನಿ ಕಠ್ಮಂಡು ನಗರದಲ್ಲಿ ಇರುವ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದಟ್ಟ ಹೊಗೆ ಆಗಸಕ್ಕೆ ಚಿಮ್ಮುತ್ತಿರುವ ವಿಡಿಯೋ ದೃಶ್ಯ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments