ಬುದ್ಧನ ಜನ್ಮಸ್ಥಳ ಲುಂಬಿನಿಗೆ ಪ್ರಧಾನಿ ಮೋದಿ

Webdunia
ಸೋಮವಾರ, 16 ಮೇ 2022 (08:15 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬುದ್ಧಪೂರ್ಣಿಮೆಯಂದು ಬುದ್ಧ ಜನಿಸಿದ ಸ್ಥಳವಾದ ನೇಪಾಳದ ಲುಂಬಿನಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಮಾತನಾಡಿದ ಪ್ರಧಾನಿ ಭಾರತವು ನೇಪಾಳದೊಂದಿಗೆ ಅಪೂರ್ವ ಸಂಬಂಧವನ್ನು ಹೊಂದಿದೆ ಎಂದು ಭಾನುವಾರ ಹೇಳಿದ್ದಾರೆ. 
 
ಬುದ್ಧ ಜಯಂತಿಯಂದು ಮೋದಿ ಮಾಯಾದೇವಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದು, ಬೌದ್ಧ ಸಂಸ್ಕೃತಿ ಹಾಗೂ ಪರಂಪರೆಯ ಅಂತಾರಾಷ್ಟ್ರೀಯ ಕೇಂದ್ರದ ಶಿಲಾನ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ನೇಪಾಳದ ಪ್ರಧಾನಿ ಶೇರ್‌ ಬಹಾದ್ದೂರ್‌ ದೇವುಬಾ ಅವರೊಂದಿಗೆ ಜಲವಿದ್ಯುತ್‌, ಸಂಪರ್ಕ ಕ್ಷೇತ್ರದ ಅಭಿವೃದ್ಧಿಗಾಗಿ ಎರಡೂ ದೇಶಗಳ ನಡುವಿನ ಸಹಕಾರ ವಿಸ್ತರಣೆಯ ಕುರಿತು ಚರ್ಚೆ ನಡೆಸುವುದಾಗಿ ಮೋದಿ ಹೇಳಿದ್ದಾರೆ.
 
2014ರಿಂದ ಇದು ಮೋದಿ ಅವರ 5ನೇ ನೇಪಾಳ ಭೇಟಿಯಾಗಿದೆ. ಈ ಭೇಟಿಯ ವೇಳೆ ಅವರು ಮಾಯಾದೇವಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನೇಪಾಳ ಸರ್ಕಾರ ಮತ್ತು ಲುಂಬಿನಿ ಅಭಿವೃದ್ಧಿ ಟ್ರಸ್ಟ್‌ ಏರ್ಪಡಿಸಿರುವ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಆವರು ಭಾಷಣ ಮಾಡಲಿದ್ದಾರೆ. ದೆಹಲಿಯ ಅಂತಾರಾಷ್ಟ್ರೀಯ ಬುದ್ದಿಶ್‌್ಟಕಾನ್ಫೆಡರೇಶನ್‌ಗೆ ಸೇರಿದ ಜಾಗದಲ್ಲಿ ಸಂಸ್ಕೃತಿ ಮತ್ತು ಪರಂಪರೆ ಕೇಂದ್ರ ಸ್ಥಾಪನೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments