Webdunia - Bharat's app for daily news and videos

Install App

ಹಿಂದೂಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಬಾಂಗ್ಲಾದೇಶಕ್ಕೆ ಖಡಕ್ ಸೂಚನೆ ಕೊಟ್ಟ ಮೋದಿ

Krishnaveni K
ಶುಕ್ರವಾರ, 4 ಏಪ್ರಿಲ್ 2025 (15:50 IST)
ನವದೆಹಲಿ: ಬಿಐಎಂಎಸ್ ಟಿಇಸಿ ಶೃಂಗದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿ ಮೊಹಮ್ಮದ್ ಯೂನಸ್ ಗೆ ಹಿಂದೂಗಳ ರಕ್ಷಣೆ ಮಾಡುವಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಶೇಖ್ ಹಸೀನಾ ಪದಚ್ಯುತಿ ಬಳಿಕ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ವ್ಯಾಪಕ ಹಿಂಸಾಚಾರ, ಕೊಲೆ, ಅತ್ಯಾಚಾರ ನಡೆದಿತ್ತು. ಇದರ ಬಗ್ಗೆ ಭಾರತ ಈಗಾಗಲೇ ಹಲವು ಬಾರಿ ತನ್ನ ಆತಂಕ ವ್ಯಕ್ತಪಡಿಸಿದೆ.

ಇತ್ತೀಚೆಗೆ ಅಮೆರಿಕಾಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿಗೆ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡಾ ಬಾಂಗ್ಲಾದೇಶವನ್ನು ಭಾರತವೇ ನೋಡಿಕೊಳ್ಳಲಿದೆ ಎಂದಿದ್ದರು. ಇಂದು ಮೊಹಮ್ಮದ್ ಯೂನಸ್ ರನ್ನು ಭೇಟಿಯಾದ ಪ್ರಧಾನಿ ಮೋದಿ ಬಾಂಗ್ಲಾದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ಮಾಡುವಂತೆ ಕೋರಿದ್ದಾರೆ.

ಇದುವರೆಗೆ ಅಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ, ಕೊಲೆ ಪ್ರಕರಣಗಳ ತನಿಖೆ ಮಾಡಬೇಕು. ಮುಂದೆ ಅಲ್ಪಸಂಖ್ಯಾತರ ಮೇಲೆ ದಾಳಿಗಳಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments