Webdunia - Bharat's app for daily news and videos

Install App

ಮಾಯಾದೇವಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

Webdunia
ಸೋಮವಾರ, 16 ಮೇ 2022 (14:30 IST)
ಕಠ್ಮಂಡು: ನೇಪಾಳದ ಪ್ರಧಾನಿ ಶೇರ್‌ ಬದೂರ್‌ ದೆವುಬಾ ಆಹ್ವಾನದ ಮೇರೆಗೆ ನೇಪಾಳಕ್ಕೆ ಪ್ರವಾಸ ತೆರಳಿರುವ ಪ್ರಧಾನಿ ನರೇಂದ್ರ ಮೋದಿ, ನೇಪಾಳದ ಪ್ರಧಾನಿ ಜೊತೆ ಮಾಯಾ ದೇವಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. 
 
ಭಗವಾನ್ ಬುದ್ಧನ ಜನ್ಮಸ್ಥಳವಾದ ಬೌದ್ಧ ಧರ್ಮದ ಪವಿತ್ರ ಸ್ಥಳಗಳಲ್ಲಿ ಒಂದಾದ ಲುಂಬಿನಿಗೆ ಬುದ್ಧಪೂರ್ಣಿಮೆ ದಿನ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು (ಮೇ.16) ನೇಪಾಳಕ್ಕೆ ಆಗಮಿಸಿದ್ದಾರೆ. ಈ ಭೇಟಿಯ ವೇಳೆ ಜಲವಿದ್ಯುತ್, ಅಭಿವೃದ್ಧಿ ಮತ್ತು ಸಂಪರ್ಕ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ವಿಸ್ತರಿಸಲು ಅವರು ನೇಪಾಳ ಪ್ರಧಾನಿ ಬಹದ್ದೂರ್ ದೇವುಬಾ ಅವರೊಂದಿಗೆ ಸಭೆ ನಡೆಸಿದ್ದಾರೆ.
 
ಉತ್ತರ ಪ್ರದೇಶದ ಕುಶಿನಗರದಿಂದ ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಮೋದಿ ಮತ್ತು ಅವರ ಪರಿವಾರದವರು ನೇಪಾಳಕ್ಕೆ ಆಗಮಿಸಿದರು. ನೇಪಾಳದಲ್ಲಿ ಬಂದಿಳಿದೆ. ಬುದ್ಧ ಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ ನೇಪಾಳದ ಅದ್ಭುತ ಜನರ ನಡುವೆ ಇರಲು ಸಂತೋಷವಾಗಿದೆ. ಲುಂಬಿನಿಯಲ್ಲಿನ ಕಾರ್ಯಕ್ರಮಗಳನ್ನು ಎದುರು ನೋಡುತ್ತಿದ್ದೇನೆ ಎಂದು  ನೇಪಾಳಕ್ಕೆ ತೆರಳಿದ ನಂತರ ಮೋದಿ ಟ್ವೀಟ್ ಮಾಡಿದ್ದರು.
 
ಲುಂಬಿನಿಗೆ ಆಗಮಿಸಿದ ಮೋದಿ ಅವರನ್ನು ನೇಪಾಳ ಪ್ರಧಾನಿ ದೇವುಬಾ ಸ್ವಾಗತಿಸಿದರು. ನಂತರ ಪವಿತ್ರ ಮಾಯಾದೇವಿ ದೇವಸ್ಥಾನದಲ್ಲಿ ಮೋದಿ ಪ್ರಾರ್ಥನೆ ಸಲ್ಲಿಸಿದರು. ಮೋದಿ ಐತಿಹಾಸಿಕ ದೇವಾಲಯಕ್ಕೆ ಭೇಟಿ ನೀಡಿದಾಗ ದೇವುಬಾ ಅವರ ಜೊತೆಗಿದ್ದರು. ಲುಂಬಿನಿಯ ಪವಿತ್ರ ಮಾಯಾ ದೇವಿ ದೇವಾಲಯದಲ್ಲಿ ಪ್ರಾರ್ಥನೆಯೊಂದಿಗೆ ನೇಪಾಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ' ಎಂದು ಪ್ರಧಾನ ಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments