Webdunia - Bharat's app for daily news and videos

Install App

ಕ್ಷಮೆ ಕೇಳಿದ ಶ್ರೀಲಂಕಾ ಅಧ್ಯಕ್ಷ?

Webdunia
ಮಂಗಳವಾರ, 19 ಏಪ್ರಿಲ್ 2022 (11:11 IST)
ಕೊಲಂಬೋ : ಅತ್ಯಂತ ತೀವ್ರ ಮಟ್ಟದ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾದ ತಪ್ಪಿಗೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಕ್ಷಮೆ ಕೇಳಿದ್ದಾರೆ. ಈ ತಪ್ಪನ್ನು ಸರಿ ಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಭೀಕರ ಆರ್ಥಿಕ ಸ್ಥಿತಿಯಿಂದ ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಇದರ ಮಧ್ಯೆಯೇ ಸೋಮವಾರ ಹೊಸ 17 ಸದಸ್ಯರ ಕ್ಯಾಬಿನೆಟ್ ಅನ್ನು ನೇಮಿಸಿದ್ದರು. ಈ ಹೊಸ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಚರ್ಚಿಸುವಾಗ ರಾಜಪಕ್ಸೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. 

ಕಳೆದ ಎರಡೂವರೆ ವರ್ಷಗಳಲ್ಲಿ ಅತೀ ದೊಡ್ಡ ಸವಾಲುಗಳನ್ನು ಎದುರಿಸಿದ್ದೇವೆ. ಕೋವಿಡ್-19 ನೊಂದಿಗೆ ಸಾಲದ ಹೊರೆ ನಮ್ಮನ್ನು ಆರ್ಥಿಕ ಬಿಕ್ಕಟ್ಟಿಗೆ ದೂಡಲು ಕಾರಣವಾಯಿತು. ನಮ್ಮ ಕಡೆಯಿಂದ ಕೆಲವು ತಪ್ಪುಗಳಾಗಿವೆ. ಅವುಗಳನ್ನು ಸರಿಪಡಿಸಬೇಕಾಗಿದೆ. ಅವುಗಳನ್ನು ಸರಿಪಡಿಸಿ, ಮುನ್ನಡೆದು, ಜನರ ವಿಶ್ವಾಸವನ್ನು ಮರಳಿ ಪಡೆಯಬೇಕು ಎಂದು ರಾಜಪಕ್ಸೆ ತಿಳಿಸಿದರು. 

ಶ್ರೀಲಂಕಾ ವಿದೇಶಿ ವಿನಿಮಯಕ್ಕೆ ಹಣದ ಕೊರತೆಯನ್ನು ಎದುರಿಸುತ್ತಿದ್ದು, ಸುಮಾರು 25 ಶತಕೋಟಿ ಡಾಲರ್(1.90 ಲಕ್ಷ ಕೋಟಿ ರೂ.)ಗಳಷ್ಟು ಮರುಪಾವತಿಯೂ ಬಾಕಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments