ಹಿಜಬ್ ವಿರೋಧಿಸಿ ಇರಾನ್ನಲ್ಲಿ ಭುಗಿಲೆದ್ದ ಪ್ರತಿಭಟನೆ

Webdunia
ಬುಧವಾರ, 21 ಸೆಪ್ಟಂಬರ್ 2022 (14:20 IST)
ತೆಹ್ರಾನ್ : ಹಿಜಬ್ ಧರಿಸದ್ದಕ್ಕೆ ನೈತಿಕ ಪೊಲೀಸ್ಗಿರಿಗೆ ಯುವತಿ ಬಲಿಯಾದ ಪ್ರಕರಣ ವಿರೋಧಿಸಿ ಇರಾನ್ನಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ವೇಳೆ ಮೂವರು ಸಾವನ್ನಪ್ಪಿದ್ದಾರೆ.

ಪ್ರತಿಭಟನೆಯಲ್ಲಿ ಮೂವರು ಸಾವಿಗೀಡಾಗಿರುವ ಬಗ್ಗೆ ಇರಾನ್ ಗವರ್ನರ್ ಎಸ್ಮಾಯಿಲ್ ಜರೀ ಕೌಶಾ ದೃಢಪಡಿಸಿದ್ದಾರೆ.

ಯಾವುದೇ ಹಂತದ ಭದ್ರತಾ ಅಥವಾ ಕಾನೂನು ಜಾರಿ ಪಡೆಗಳು ಬಳಸದ ಬಂದೂಕುಗಳಿಂದ ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ತನಿಖೆಗಳು ದೃಢಪಡಿಸಿವೆ ಎಂದು ವಾಯುವ್ಯ ಕುರ್ದಿಸ್ತಾನ್ ಪ್ರಾಂತ್ಯದ ಗವರ್ನರ್ ಕೌಶಾ ಹೇಳಿದ್ದಾರೆ.

ಮೃತರಲ್ಲಿ ಒಬ್ಬರು ದಿವಾಂಡರೆಹ್ನಲ್ಲಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ಸಾಕ್ವೆಜ್ನ ಆಸ್ಪತ್ರೆ ಬಳಿ ಸಾವನ್ನಪ್ಪಿದ್ದರೆ, ಮತ್ತೊಬ್ಬರದು ಅನುಮಾನಾಸ್ಪದ ಸಾವಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಗವರ್ನರ್ ತಿಳಿಸಿದ್ದಾರೆ.

ಹಿಜಬ್ ಧರಿಸಿಲ್ಲ ಎಂಬ ಕಾರಣಕ್ಕೆ 22 ವಯಸ್ಸಿನ ಯುವತಿ ಮಹ್ಸಾ ಆಮಿನಿ, ನೈತಿಕ ಪೊಲೀಸ್ಗಿರಿಗೆ ಬಲಿಯಾಗಿದ್ದಳು. ಆಕೆಯನ್ನು ಹಿಜಬ್ಧಾರಿ ಮಹಿಳೆಯರೇ ಥಳಿಸಿದ್ದರು. ನಂತರ ಬಲವಂತವಾಗಿ ಪೊಲೀಸರಿಗೆ ಕಾರಿಗೆ ನೂಕು ದೌರ್ಜನ್ಯ ನಡೆಸಲಾಗಿತ್ತು.

ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಸಾವನ್ನಪ್ಪಿದ್ದಳು. ಈ ಘಟನೆಯನ್ನು ಖಂಡಿಸಿ ಇರಾನ್ನಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments