ನೇರ ಎಚ್ಚರಿಕೆ ನೀಡಿದ ಪುಟಿನ್!?

Webdunia
ಸೋಮವಾರ, 7 ಮಾರ್ಚ್ 2022 (08:50 IST)
ಮಾಸ್ಕೋ : ಉಕ್ರೇನ್ ರಾಜ್ಯತ್ವ(ಸ್ಟೇಟ್ಹುಡ್) ಅಪಾಯದಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನೇರವಾದ ಎಚ್ಚರಿಕೆ ನೀಡಿದ್ದಾರೆ.

ಉಕ್ರೇನ್ ದೇಶದವರು ಈಗ ಏನು ಮಾಡುತ್ತಿದ್ದಾರೋ ಅದನ್ನು ಮುಂದುವರಿಸಿದರೆ ದೇಶವಾಗಿ ಉಳಿಯವುದು ಅನುಮಾನ. ಹಾಗೆ ಏನಾದರೂ ಆದರೆ ಉಕ್ರೇನಿಗರೇ ಕಾರಣ ಎಂದು ಪುಟಿನ್ ಹೇಳಿಕೆ ನೀಡಿದ್ದಾರೆ.

ಈ ಮೊದಲು ಈಗಿರುವ ಉಕ್ರೇನ್ ಸರ್ಕಾರವನ್ನು ಪತನಗೊಳಿಸಿ ತನ್ನ ಕೈಗೊಂಬೆ ವ್ಯಕ್ತಿಯನ್ನು ನೇಮಿಸುವ ಮೂಲಕ ಹೊಸ ಸರ್ಕಾರ ಸ್ಥಾಪನೆಗೆ ಪುಟಿನ್ ಮುಂದಾಗಿದ್ದಾರೆ ಎನ್ನಲಾಗುತ್ತಿತ್ತು.
ಆದರೆ ಈ ಹೊಸ ಹೇಳಿಕೆಯಿಂದ ಉಕ್ರೇನ್ ದೇಶವನ್ನೇ ಪುಟಿನ್ ಸಂಪೂರ್ಣವಾಗಿ ಕೈವಶ ಮಾಡುವ ಭೀತಿ ಎದುರಾಗಿದೆ.

ಈಗಾಗಲೇ ಶಸ್ತ್ರಾಸ್ತ್ರ ಗೋದಾಮುಗಳು, ಯುದ್ಧಸಾಮಗ್ರಿ ಡಿಪೋಗಳು, ವಾಯುಯಾನ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳು ಸೇರಿದಂತೆ ಉಕ್ರೇನ್ನ ಪ್ರಮುಖ ಮಿಲಿಟರಿ ಮೂಲಸೌಕರ್ಯವನ್ನು ನಾಶಪಡಿಸುವ ಕಾರ್ಯಾಚರಣೆಯನ್ನು ರಷ್ಯಾ ಪ್ರಾಯೋಗಿಕವಾಗಿ ಪೂರ್ಣಗೊಳಿಸಿದೆ ಎಂದು ಪುಟಿನ್ ಹೇಳಿದರು. 

ಉಕ್ರೇನ್ ದೇಶದ ಈ ಸ್ಥಿತಿಗೆ ಅಲ್ಲಿನ ನಾಯಕತ್ವವೇ ಕಾರಣ. ಪಾಶ್ಚಾತ್ಯ ದೇಶಗಳು ನಿರ್ಬಂಧ ನಮ್ಮ ಮೇಲೆ ಯುದ್ಧ ಸಾರಿದಂತೆ. ರಷ್ಯಾದ ಪಡೆಗಳು ತಮಗೆ ನಿಯೋಜಿಸಲಾದ ಕಾರ್ಯಗಳನ್ನು ಪೂರೈಸುತ್ತವೆ ಮತ್ತು ಉಕ್ರೇನ್ನಲ್ಲಿ ಕಾರ್ಯಾಚರಣೆಯು ಯೋಜನೆ ಮತ್ತು ವೇಳಾಪಟ್ಟಿಗೆ ಅನುಗುಣವಾಗಿ ಮುಂದುವರಿಯುತ್ತದೆ ಎಂದು ಅವರು ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments