Webdunia - Bharat's app for daily news and videos

Install App

ನೇರ ಎಚ್ಚರಿಕೆ ನೀಡಿದ ಪುಟಿನ್!?

Webdunia
ಸೋಮವಾರ, 7 ಮಾರ್ಚ್ 2022 (08:50 IST)
ಮಾಸ್ಕೋ : ಉಕ್ರೇನ್ ರಾಜ್ಯತ್ವ(ಸ್ಟೇಟ್ಹುಡ್) ಅಪಾಯದಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನೇರವಾದ ಎಚ್ಚರಿಕೆ ನೀಡಿದ್ದಾರೆ.

ಉಕ್ರೇನ್ ದೇಶದವರು ಈಗ ಏನು ಮಾಡುತ್ತಿದ್ದಾರೋ ಅದನ್ನು ಮುಂದುವರಿಸಿದರೆ ದೇಶವಾಗಿ ಉಳಿಯವುದು ಅನುಮಾನ. ಹಾಗೆ ಏನಾದರೂ ಆದರೆ ಉಕ್ರೇನಿಗರೇ ಕಾರಣ ಎಂದು ಪುಟಿನ್ ಹೇಳಿಕೆ ನೀಡಿದ್ದಾರೆ.

ಈ ಮೊದಲು ಈಗಿರುವ ಉಕ್ರೇನ್ ಸರ್ಕಾರವನ್ನು ಪತನಗೊಳಿಸಿ ತನ್ನ ಕೈಗೊಂಬೆ ವ್ಯಕ್ತಿಯನ್ನು ನೇಮಿಸುವ ಮೂಲಕ ಹೊಸ ಸರ್ಕಾರ ಸ್ಥಾಪನೆಗೆ ಪುಟಿನ್ ಮುಂದಾಗಿದ್ದಾರೆ ಎನ್ನಲಾಗುತ್ತಿತ್ತು.
ಆದರೆ ಈ ಹೊಸ ಹೇಳಿಕೆಯಿಂದ ಉಕ್ರೇನ್ ದೇಶವನ್ನೇ ಪುಟಿನ್ ಸಂಪೂರ್ಣವಾಗಿ ಕೈವಶ ಮಾಡುವ ಭೀತಿ ಎದುರಾಗಿದೆ.

ಈಗಾಗಲೇ ಶಸ್ತ್ರಾಸ್ತ್ರ ಗೋದಾಮುಗಳು, ಯುದ್ಧಸಾಮಗ್ರಿ ಡಿಪೋಗಳು, ವಾಯುಯಾನ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳು ಸೇರಿದಂತೆ ಉಕ್ರೇನ್ನ ಪ್ರಮುಖ ಮಿಲಿಟರಿ ಮೂಲಸೌಕರ್ಯವನ್ನು ನಾಶಪಡಿಸುವ ಕಾರ್ಯಾಚರಣೆಯನ್ನು ರಷ್ಯಾ ಪ್ರಾಯೋಗಿಕವಾಗಿ ಪೂರ್ಣಗೊಳಿಸಿದೆ ಎಂದು ಪುಟಿನ್ ಹೇಳಿದರು. 

ಉಕ್ರೇನ್ ದೇಶದ ಈ ಸ್ಥಿತಿಗೆ ಅಲ್ಲಿನ ನಾಯಕತ್ವವೇ ಕಾರಣ. ಪಾಶ್ಚಾತ್ಯ ದೇಶಗಳು ನಿರ್ಬಂಧ ನಮ್ಮ ಮೇಲೆ ಯುದ್ಧ ಸಾರಿದಂತೆ. ರಷ್ಯಾದ ಪಡೆಗಳು ತಮಗೆ ನಿಯೋಜಿಸಲಾದ ಕಾರ್ಯಗಳನ್ನು ಪೂರೈಸುತ್ತವೆ ಮತ್ತು ಉಕ್ರೇನ್ನಲ್ಲಿ ಕಾರ್ಯಾಚರಣೆಯು ಯೋಜನೆ ಮತ್ತು ವೇಳಾಪಟ್ಟಿಗೆ ಅನುಗುಣವಾಗಿ ಮುಂದುವರಿಯುತ್ತದೆ ಎಂದು ಅವರು ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments