Webdunia - Bharat's app for daily news and videos

Install App

ಸಿಖ್ಖರ ಪೇಟ, ಕಡಗ ಅಭಿಯಾನ ಶುರು: ಎಲ್ಲದಕ್ಕೂ ರಾಹುಲ್ ಗಾಂಧಿ ಕಾರಣ

Krishnaveni K
ಬುಧವಾರ, 11 ಸೆಪ್ಟಂಬರ್ 2024 (10:05 IST)
Photo Credit: X
ವಾಷಿಂಗ್ಟನ್: ಸೋಷಿಯಲ್ ಮೀಡಿಯಾದಲ್ಲಿ ಈಗ ಸಿಖ್ ಸಮುದಾಯದವರಿಂದ ಪೇಟ, ಕಡಗ ಅಭಿಯಾನ ಶುರುವಾಗಿದೆ. ಇದಕ್ಕೆಲ್ಲಾ ರಾಹುಲ್ ಗಾಂಧಿ ಭಾಷಣವೇ ಕಾರಣ.

ಅಮೆರಿಕಾದ ಜಾರ್ಜ್ ಟೌನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ರಾಹುಲ್ ಗಾಂಧಿ ದೇಶದಲ್ಲಿ ಈಗ ಸಿಖ್ ಸಮುದಾಯದವರು ಪೇಟ, ಕಡಗ ತೊಡಲೂ ಹಿಂಜರಿಯುವ ಭಯದ ವಾತಾವರಣವಿದೆ ಎಂದಿದ್ದರು. ಅವರ ಈ ಹೇಳಿಕೆಗೆ ಸಿಖ್ ಸಮುದಾಯದವರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸಿಖ್ ಸಮುದಾಯಕ್ಕೆ ಸೇರಿದ ಕೇಂದ್ರ ಸಚಿವ ಹರ್ದೀಪ್ ಇದು ಅತ್ಯಂತ ಅಪಾಯಕಾರಿ ಹೇಳಿಕೆ. ನಮ್ಮ ಸಮುದಾಯದ ನಡುವೆ ಧ್ವೇಷದ ಬೀಜ ಬಿತ್ತುವ ಕೆಲಸ ಎಂದಿದ್ದಾರೆ. ನಮ್ಮಸಮುದಾಯದವರು ಅನೇಕರು ಅಮೆರಿಕಾದಲ್ಲಿ ಜೀವನೋಪಾಯಕ್ಕಾಗಿ ನೆಲೆಸಿದ್ದಾರೆ. ಅವರಿಗೆ ಭಾರತದಲ್ಲಿ ಏನಾಗುತ್ತದೆ ಎಂದು ಗೊತ್ತಿಲ್ಲ. ಇಂತಹ ಹೇಳಿಕೆಗಳನ್ನು ನಂಬಿ ದೇಶದ ಬಗ್ಗೆ ಧ್ವೇಷ ಸಾಧಿಸುತ್ತಾರೆ ಎಂದಿದ್ದಾರೆ.

ಇನ್ನು ಸಿಖ್ ಸಮುದಾಯಕ್ಕೆ ಸೇರಿದ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪೇಟ ಮತ್ತು ಕಡಗ ಟ್ರೆಂಡ್ ಶುರು ಮಾಡಿದ್ದಾರೆ. ಪೇಟ ಮತ್ತು ಕಡಗ ಧರಿಸಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸುವ ಮೂಲಕ ನಾನು ನನ್ನ ದೇಶದಲ್ಲಿ ನಿರ್ಭೀತನಾಗಿ ಪೇಟ, ಕಡಗವನ್ನು ಧರಿಸುತ್ತಿದ್ದೇನೆ ಎಂದು ಅಭಿಯಾನ ಶುರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments