ಆಹಾರಕ್ಕಾಗಿ ನಿವಾಸಿಗಳ ಆಕ್ರಂದನ!

Webdunia
ಮಂಗಳವಾರ, 12 ಏಪ್ರಿಲ್ 2022 (07:03 IST)
ಬೀಜಿಂಗ್ : ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದಾಗಿ ಚೀನಾದ ಶಾಂಘೈ ನಗರದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಪ್ರಾರಂಭಿಸಿ 3 ವಾರಗಳು ಕಳೆದಿವೆ.

ಇಂದಿಗೂ ಶಾಂಘೈ ನಗರದ ಜನರು ಕಳೆದ 3 ವಾರಗಳಿಂದ ತಮ್ಮ ಮನೆಗಳಿಂದ ಹೊರ ಇಣುಕಲೂ ಸಾಧ್ಯವಾಗುತ್ತಿಲ್ಲ. ಇದೀಗ ನಗರದ ಎರಡೂವರೆ ಕೋಟಿ ಜನರು ಆಹಾರ, ಔಷಧಗಳಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಶಾಂಘೈ ನಗದ ಕಟ್ಟುನಿಟ್ಟಿನ ಲಾಕ್ಡೌನ್ ನಡುವೆ ನಗರದ ನಿವಾಸಿಗಳು ತಮ್ಮ ಮನೆಗಳಿಂದ ಕಿರುಚಾಟ, ಅರಚಾಟಗಳನ್ನು ಪ್ರಾರಂಭಿಸಿದ್ದಾರೆ. ಜನರು ತಮ್ಮ ಕಿಟಕಿಗಳಿಂದ ಕಿರುಚುವ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಜನರ ಆಕ್ರಂದನವೇ ಅವರ ಕಷ್ಟದ ಕ್ಷಣಗಳನ್ನು ಬಯಲುಮಾಡುತ್ತಿದೆ.

ಟ್ವಿಟ್ಟರ್ ಬಳಕೆದಾರ ಪ್ಯಾಟ್ರಿಕ್ ಮ್ಯಾಡ್ರಿಡ್ ತಮ್ಮ ಖಾತೆಯಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಶಾಂಘೈ ನಿವಾಸಿಗಳು ತಮ್ಮ ಅಪಾರ್ಟ್ಮೆಂಟ್ಗಳಿಂದ ಕಿರುಚಾಡುವ ಸನ್ನಿವೇಶವನ್ನು ಕಾಣಬಹುದು.

ವೀಡಿಯೋ ಬಗ್ಗೆ ವಿವರಿಸಿರುವ ಮ್ಯಾಡ್ರಿಡ್, ಇದು ನನ್ನ ಆತ್ಮೀಯ ಸ್ನೇಹಿತನ ತಂದೆ ತೆಗೆದಿರುವ ವೀಡಿಯೋ. ಶಾಂಘೈ ಜನರ ಕಷ್ಟದ ಸತ್ಯಾಸತ್ಯತೆಯನ್ನು ಅವರು ಸೆರೆಹಿಡಿದಿದ್ದಾರೆ.

ಲಾಕ್ಡೌನ್ ಪ್ರಾರಂಭವಾಗಿ ವಾರಗಳ ಬಳಿಕ ಅಲ್ಲಿನ ಜನರು ತಮ್ಮ ಕಿಟಕಿಗಳ ಹೊರಗೆ ಕಿರುಚಾಡುತ್ತಿದ್ದಾರೆ. ಯಾವ ಕಾರಣಕ್ಕೂ ಅವರು ತಮ್ಮ ಅಪಾರ್ಟ್ಮೆಂಟ್ ತೊರೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments