Webdunia - Bharat's app for daily news and videos

Install App

ಉರಿ ಸೇನಾ ಕೇಂದ್ರದ ಮೇಲೆ ದಾಳಿ ಭಾರತದ ಸೃಷ್ಟಿ: ಪಾಕ್ ರಕ್ಷಣಾ ಸಚಿವ

Webdunia
ಮಂಗಳವಾರ, 27 ಸೆಪ್ಟಂಬರ್ 2016 (18:35 IST)
ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿರುವ ರಾಷ್ಟ್ರಗಳನ್ನು ಏಕಾಂಗಿಯಾಗಿಸಬೇಕು ಎಂದು ವಿಶ್ವಸಂಸ್ಥೆಯಲ್ಲಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಾಗ್ದಾಳಿ ನಡೆಸುತ್ತಿರುವಂತೆ ಪಾಕ್ ರಕ್ಷಣಾ ಸಚಿವ ಖ್ವಾಜಾ. ಎಂ. ಆಸಿಫ್, ಉರಿ ಸೇನಾ ಕೇಂದ್ರದ ಮೇಲೆ ದಾಳಿ ಭಾರತದ ಸೃಷ್ಟಿ ಎಂದು ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ.  

ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ನಡೆದ ಭೀಕರ ಉಗ್ರರ ದಾಳಿ ಭಾರತದ ಸೃಷ್ಟಿಯಾಗಿದೆ. ಇದರಲ್ಲಿ ಪಾಕಿಸ್ತಾನದ ಕೈವಾಡವಿಲ್ಲ ಎಂದು ಅನಾಗರಿಕ ಹೇಳಿಕೆ ನೀಡಿದ್ದಾರೆ.
 
ಪಾಕಿಸ್ತಾನದಲ್ಲಿ ನಡೆದ ಅನೇಕ ಉಗ್ರರ ದಾಳಿಗಳಲ್ಲಿ ಭಾರತದ ಕೈವಾಡವಿದೆ. ಅದರಂತೆ, ಉರಿ ಸೇನಾ ಕೇಂದ್ರದ ಮೇಲೆ ನಡೆದ ದಾಳಿ ಕೂಡಾ ಭಾರತದ ಪ್ರೇರಿತವಾಗಿದೆ ಎಂದು ಪಾಕಿಸ್ತಾನದ ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. 
 
ಕಾಶ್ಮಿರದಲ್ಲಿ ಬಾರತೀಯ ಸೇನೆ ನಡೆಸುತ್ತಿರುವ ದೌರ್ಜನ್ಯದ ಗಮನವನ್ನು ಬೇರೆ ಕಡೆ ತಿರುಗಿಸಲು ಭಾರತ ಉರಿ ಸೇನಾಕೇಂದ್ರದ ದಾಳಿಯನ್ನು ಸೃಷ್ಟಿಸಿದೆ. ಭಾರತೀಯರಿಗೆ ಮುಂಬರುವ ದಿನಗಳಲ್ಲಿ ದುಬಾರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. 
 
ಇದಕ್ಕಿಂತ ಮೊದಲು, ಪಾಕಿಸ್ತಾನದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಾ ಉರಿ ಸೇನಾ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎನ್ನುವ ಆರೋಪ ಭಾರತ ಮಾಡುತ್ತಿದೆ. ಭಾರತದಲ್ಲಿ ನಡೆಯವ ಪ್ರತಿಯೊಂದು ಘಟನೆಗೂ ಪಾಕ್ ಕಾರಣವೆನ್ನುವುದು ಭಾರತದ ದೀರ್ಘಾವಧಿಯ ಹವ್ಯಾಸವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್‌: ನಾಳೆಯೇ ಡೇಟ್‌ ಫಿಕ್ಸ್‌ ಎಂದು ಪೋಸ್ಟ್‌

ಭಾರತದ ಪ್ರಧಾನಿ ಮೋದಿ ನನ್ನ ಚಿಕ್ಕಮ್ಮನ ಮಗನೇ: ಪಾಕ್‌ ಸಂಸದ ವ್ಯಂಗ್ಯದ ಮಾತು ಹೇಳಿದ್ದೇಕೆ

ಯೋಗದಿಂದಲೇ 128 ವರ್ಷ ಬದುಕಿದ್ದ ಪದ್ಮಶ್ರೀ ಪುರಸ್ಕೃತ ಗುರು ಸ್ವಾಮಿ ಶಿವಾನಂದ ಬಾಬಾ ಇನ್ನಿಲ್ಲ

Karanatakaa Today Weather: ರಾಜ್ಯದ ಇಂದಿನ ಹವಾಮಾನದಲ್ಲಿ ನಿರೀಕ್ಷೆಗೂ ಮೀರಿದ ಬದಲಾವಣೆ

ಮುಂದಿನ ಸುದ್ದಿ
Show comments