Webdunia - Bharat's app for daily news and videos

Install App

ಅಮೆರಿಕ ರಾಯಭಾರಿ ಕಚೇರಿಯ ಕೌನ್ಸುಲ್‌ರಾಗಿ ರಾಬರ್ಟ್ ಬುರ್ಗೆಸ್ ಅಧಿಕಾರ ಸ್ವೀಕಾರ

Webdunia
ಸೋಮವಾರ, 7 ಆಗಸ್ಟ್ 2017 (18:09 IST)
ಯುನೈಟೆಡ್ ಸ್ಟೇಟ್ಸ್ ಕಾನ್ಸುಲ್ ಜನರಲ್ ಆಗಿ ಆಗಸ್ಟ್ 7 (2017) ರಂದು ರಾಬರ್ಟ್ ಬುರ್ಗೆಸ್ ಅಧಿಕಾರ ಸ್ವೀಕರಿಸಿದ್ದಾರೆ. 
 
ವಿಶೇಷವಾಗಿ ಭಾರತ- ಅಮೆರಿಕ ಸಂಬಂಧಗಳು ಉತ್ತಮವಾಗಿರುವ ಈ ಅದ್ಭುತ ಸಮಯದಲ್ಲಿ ಯುನೈಟೆಡ್ ಸ್ಟೇಟ್ಸ್ ಪ್ರತಿನಿಧಿಯಾಗಿ ದಕ್ಷಿಣ ಭಾರತದಲ್ಲಿ ಕಾರ್ಯನಿರ್ವಹಿಸುವ ಸುವರ್ಣಾವಕಾಶ ದೊರೆತಿದೆ. ತಮಿಳುನಾಡು, ಕರ್ನಾಟಕ, ಕೇರಳ ರಾಜ್ಯಗಳಲ್ಲೂ ನಮ್ಮ ಉದ್ದೇಶಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ ಎಂದು ಬುರ್ಗೆಸ್ಸ್ ತಿಳಿಸಿದ್ದಾರೆ.
 
 ಚೆನ್ನೈಗೆ ಆಗಮಿಸುವ ಮೊದಲು, ವಾಷಿಂಗ್ಟನ್ ಡಿ.ಸಿ.ಯಲ್ಲಿರುವ ಯುಎಸ್ ಡಿಪಾರ್ಟ್‌ಮೆಂಟ್ ಆಫ್ ಸ್ಟೇಟ್‌ನಲ್ಲಿ ಬ್ಯೂರೋ ಆಫ್ ಸೌತ್ ಮತ್ತು ಸೆಂಟ್ರಲ್ ಏಷ್ಯನ್ ವ್ಯವಹಾರಗಳ ಪ್ರಾದೇಶಿಕ ವಿಷಯಗಳ ಬಗ್ಗೆ ಕಾನ್ಸಲ್ ಜನರಲ್ ಬರ್ಗೆಸ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೂ ಮುಂಚೆ, ತಜಾಕಿಸ್ತಾನ್ ದಶಾನ್ಬೆದಲ್ಲಿನ ಯುಎಸ್ ರಾಯಭಾರ ಕಚೇರಿಯಲ್ಲಿ ಉಪ ಮುಖ್ಯಸ್ಥರಾಗಿದ್ದರು. ರಾಜತಾಂತ್ರಿಕ ಹುದ್ದೆಯಲ್ಲಿ ಬಿಶ್ಕೆಕ್, ಕಿರ್ಗಿಸ್ತಾನ್; ಬಾಕು, ಅಜೆರ್ಬೈಜಾನ್; ಲಿಲೊಂಗ್ವೆ, ಮಲಾವಿ; ಮತ್ತು ಕರಾಚಿ, ಪಾಕಿಸ್ತಾನ ದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ವಿದೇಶಿ ಸೇವೆಗೆ ಆಗಮಿಸುವ ಮುಂಚೆ ಬುರ್ಗೆಸ್ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು. 
 ಇಲಿನೊಯಿಸ್ ವೌಕೇಗನ್ ಮೂಲದ ಕಾನ್ಸುಲ್ ಜನರಲ್ ಬರ್ಗೆಸ್, ಕೊಲೊರೆಡೊ ಕಾಲೇಜಿನಲ್ಲಿ ಇತಿಹಾಸ ವಿಭಾಗದಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿ ಪಡೆದಿದ್ದಾರೆ. , ಮತ್ತು ಆಸ್ಟಿನ್ ಟೆಕ್ಸಾಸ್ ವಿಶ್ವವಿದ್ಯಾಲಯದ ಎಂಬಿಎ, ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯ, ಹಾಸ್ಟಿಂಗ್ಸ್ ಕಾಲೇಜ್ ಆಫ್ ದಿ ಲಾ ದಿಂದ ಜ್ಯೂರಿಸ್ ಡಾಕ್ಟರ್ ಪದವಿಯನ್ನು ಅವರು ಹೊಂದಿದ್ದಾರೆ. ಯು.ಎಸ್.ನ ನ್ಯಾಷನಲ್ ವಾರ್ ಕಾಲೇಜಿನಿಂದ 2012ರಲ್ಲಿ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರದಲ್ಲಿ ಸೈನ್ಸ್ ಮಾಸ್ಟರ್ ಪದವೀಧರರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments