ವಿಶ್ವಸಂಸ್ಥೆಯಲ್ಲಿ ರಷ್ಯಾ ಭರವಸೆ

Webdunia
ಭಾನುವಾರ, 13 ಮಾರ್ಚ್ 2022 (08:38 IST)
ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ದೇಶಗಳ ನಾಗರಿಕರ ಸ್ಥಳಾಂತರಕ್ಕೆ ಬಸ್ಸುಗಳ ವ್ಯವಸ್ಥೆ ಮಾಡುವುದಾಗಿ ರಷ್ಯಾ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೂ ಶನಿವಾರ ಮಾಹಿತಿ ನೀಡಿದೆ.
 
ಸದ್ಯ ಪೂರ್ವ ಉಕ್ರೇನ್ನ ಖಾರ್ಕಿವ್ ಮತ್ತು ಸುಮಿ ನಗರಗಳಲ್ಲಿ ಬಸ್ ಸಂಚಾರ ವ್ಯವಸ್ಥೆ ಮಾಡಿದ್ದಾಗಿ ರಷ್ಯಾ ತಿಳಿಸಿದೆ. ರಷ್ಯಾ, ಉಕ್ರೇನ್ನಲ್ಲಿರುವ ನ್ಯುಕ್ಲಿಯರ್ ಪವರ್ ಪ್ಲಾಂಟ್ ವಶಕ್ಕೆ ಪಡೆದ ಬೆನ್ನಲ್ಲೇ ಭದ್ರತಾ ಮಂಡಳಿಯ 15 ರಾಷ್ಟ್ರಗಳು ಶುಕ್ರವಾರ ತುರ್ತು ಸಭೆ ನಡೆಸಿದವು. ಈ ಸಭೆಯಲ್ಲಿ ರಷ್ಯಾದ ಶಾಶ್ವತ ಪ್ರತಿನಿಧಿ, ‘ವಿದೇಶಿಯರ ಶಾಂತಿಯುತ ಸ್ಥಳಾಂತರ ಪ್ರಕ್ರಿಯೆಗೆ ರಷ್ಯಾ ಮಿಲಿಟರಿ ಎಲ್ಲಾ ರೀತಿ ಪ್ರಯತ್ನ ಮಾಡುತ್ತಿದೆ.

ಆದರೆ ಉಕ್ರೇನ್ 3700 ಭಾರತೀಯರು, 2700 ವಿಯೆಟ್ನಾಂ, ಚೀನಾದ 121 ಜನರು ಸೇರಿ ಅನೇಕರನ್ನು ಖಾರ್ಕಿವ್ ಮತ್ತು ಸುಮಿನಲ್ಲಿ ಒತ್ತೆಯಾಗಿರಿಸಿಕೊಂಡಿದೆ’ ಎಂದು ಆರೋಪಿಸಿದ್ದಾರೆ.‘ರಷ್ಯಾದ ಬೆಲ್ಗೋರ್ಡ್ ಪ್ರದೇಶದಲ್ಲಿ ಖಾರ್ಕಿವ್ ಮತ್ತು ಸುನಿಯಿಂದ ಸ್ಥಳಾಂತರ ಪ್ರಕ್ರಿಯೆಗೆ 130 ಬಸ್ಸುಗಳು ಸಜ್ಜಾಗಿವೆ.

ಅವರನ್ನು ವಾಪಸ್ ಬೆಲ್ಗೋರ್ಡ್ಗೆ ಕರೆತಂದು ಅಲ್ಲಿಂದ ಸ್ವದೇಶಕ್ಕೆ ಕಳುಹಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ. ಆದರೆ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂಬ ಆರೋಪವನ್ನು ಭಾರತ ತಳ್ಳಿಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments