Webdunia - Bharat's app for daily news and videos

Install App

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

Sampriya
ಭಾನುವಾರ, 20 ಜುಲೈ 2025 (10:54 IST)
Photo Credit X
ರಿಯಾದ್: 15ನೇ ವಯಸ್ಸಿನಲ್ಲಿ ಕೋಮಾಕ್ಕೆ ಜಾರಿದ್ದ ಸೌದಿ ಅರೇಬಿಯಾದ ರಾಜಕುಮಾರ 20 ವರ್ಷಗಳ ಕಾಲ ಸಾವು–ಬದುಕಿನ ನಡುವೆ ಹೋರಾಟ ನಡೆಸಿ ಶನಿವಾರ ನಿಧನರಾಗಿದ್ದಾರೆ. 

ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್-ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ (36) ನಿಧನರಾಗಿದ್ದಾರೆ. ಇಂದು ರಿಯಾದ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಂದೆ ಪ್ರಿನ್ಸ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ತಿಳಿಸಿದ್ದಾರೆ.

ಗೌರವ ಸೂಚಕವಾಗಿ ಮುಂದಿನ ಮೂರು ದಿನಗಳ ಕಾಲ ಸಂತಾಪ ಸಭೆ ನಡೆಸಲಾಗುವುದು ಎಂದು ಪ್ರಿನ್ಸ್ ಖಾಲಿದ್ ಹೇಳಿದ್ದಾರೆ. ಮಗನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಪ್ರಿನ್ಸ್ ಖಾಲಿದ್, ಅವನ ಬದುಕು– ಸಾವು ದೇವರಿಚ್ಛೆ ಎಂದು ಹಿಂದೆ ಹಲವು ಬಾರಿ ಹೇಳಿಕೊಂಡಿದ್ದರು.

ನಮ್ಮ ಪ್ರೀತಿಯ ಪುತ್ರ, ರಾಜಕುಮಾರ ಅಲ್-ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನಕ್ಕೆ ನಾವು ತೀವ್ರ ಶೋಕಿಸುತ್ತೇವೆ. ಸರ್ವಶಕ್ತನಾದ ಅಲ್ಲಾಹನು ಅವರಿಗೆ ಸ್ವರ್ಗದಲ್ಲಿ ಸ್ಥಾನ ನೀಡಲಿ. ಕುಟುಂಬಸ್ಥರು ಮತ್ತು ಪ್ರೀತಿಪಾತ್ರರಿಗೆ ಸಾಂತ್ವನ ನೀಡಲಿ ಎಂದು ನಾವು ಪ್ರಾರ್ಥಿಸುತ್ತೇವೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಿನ್ಸ್ ಖಾಲಿದ್ ಭಾವುಕ ಪೋಸ್ಟ್‌ ಹಾಕಿದ್ದಾರೆ. 

 2005ರಲ್ಲಿ ಲಂಡನ್ ಮಿಲಿಟರಿ ಕಾಲೇಜಿನಲ್ಲಿ ಓದುತ್ತಿದ್ದಾಗ ರಾಜಕುಮಾರ ಅಲ್-ವಲೀದ್ ಅವರಿಗೆ ಅಪಘಾತವಾಗಿತ್ತು. ಅಪಘಾತದಲ್ಲಿ ಮಿದುಳಿನ ರಕ್ತಸ್ರಾವವಾಗಿತ್ತು. ಬಳಿಕ ಅವರನ್ನು ರಿಯಾದ್‌ನ ಕಿಂಗ್ ಅಬ್ದುಲಜೀಜ್ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. 20 ವರ್ಷದಿಂದ ಕೋಮದಲ್ಲೇ ಇದ್ದು, ಈಗ ಉಸಿರು ಚೆಲ್ಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments