Webdunia - Bharat's app for daily news and videos

Install App

ದಕ್ಷಿಣ ಕೊರಿಯಾ ವಿಮಾನ ದುರಂತ : ಮೃತರ ಸಂಖ್ಯೆ 179ಕ್ಕೆ ಏರಿಕೆ, ಇಬ್ಬರ ರಕ್ಷಣೆ

Sampriya
ಭಾನುವಾರ, 29 ಡಿಸೆಂಬರ್ 2024 (12:23 IST)
ಸಿಯೋಲ್: ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ವಿಮಾನ ಅವಘಡದಲ್ಲಿ 179 ಮಂದಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

181 ಮಂದಿಯಿದ್ದ ವಿಮಾನದಲ್ಲಿ ಇಬ್ಬರನ್ನು ಮಾತ್ರ ಜೀವ ಸಹಿತ ರಕ್ಷಿಸಲು ಸಾಧ್ಯವಾಗಿದೆ. ಈ ಕುರಿತು ಅಧಿಕೃತ ಪ್ರಕಟಣೆ ಮಾತ್ರ ಬಾಕಿಯಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

175 ಪ್ರಯಾಣಿಕರು ಮತ್ತು 6 ವೈಮಾನಿಕ ಸಿಬ್ಬಂದಿಯಿದ್ದ ವಿಮಾನ ಇಂದು ಬೆಳಗ್ಗೆ 9.05ಕ್ಕೆ (ಅಲ್ಲಿನ ಕಾಲಮಾನ) ಲ್ಯಾಂಡಿಂಗ್‌ ಗಿಯರ್‌ ವೈಫಲ್ಯದಿಂದಾಗಿ ರನ್‌ವೇಯಿಂದ ಪಲ್ಟಿಯಾಗಿ ಕಾಂಕ್ರೀಟ್‌ ತಡೆಗೋಡೆಗೆ ಡಿಕ್ಕಿಯಾದ ಬಳಿಕ ಬೆಂಕಿ ಹತ್ತಿಕೊಂಡಿದೆ. ತುರ್ತು ಪರಿಹಾರ ಕಾರ್ಯಾಚರಣೆ ಮಾಡಿದ ಹೊರತಾಗಿಯೂ ಪ್ರಯಾಣಿಕರನ್ನು ರಕ್ಷಿಸಲು ಸಾಧ್ಯವಾಗಿಲ್ಲ.

ಥಾಯ್ಲೆಂಡ್‌ನಿಂದ ಬಂದಿದ್ದ ಜೆಜು ಏರ್‌ವೇಸ್‌ ವಿಮಾನ ಮುವಾನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗುತ್ತಿರುವಾಗ ಈ ಭೀಕರ ಅವಘಡ ಸಂಭವಿಸಿದೆ. ಇದುವರೆಗೆ ಇಬ್ಬರನ್ನು ಮಾತ್ರ ರಕ್ಷಿಸಲು ಸಾಧ್ಯವಾಗಿದೆ ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ.

ಫ್ಲೈಟ್ ರಾಡಾರ್ ಪ್ರಕಾರ ಬೋಯಿಂಗ್ 737-8AS ಜೆಜು ಏರ್ ಪ್ಲೇನ್ ಸ್ಥಳೀಯ MBC ಬ್ರಾಡ್‌ಕಾಸ್ಟರ್ ಹಂಚಿಕೊಂಡ ವೀಡಿಯೊ ಮುವಾನ್ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಇಳಿಯುವುದನ್ನು ತೋರಿಸಿದೆ. ಇಡೀ ವಿಮಾನ ಬೆಂಕಿಯ ಉಂಡೆಯಂತೆ ಹೊತ್ತಿ ಉರಿದು ಎಂಜಿನ್‌ನಿಂದ ಹೊಗೆ ಬರುತ್ತಿರುವುದು ಈ ವೀಡಿಯೊದಲ್ಲಿ ಕಾಣಿಸುತ್ತಿದೆ. ವಿಮಾನ ಪೂರ್ತಿ ನಾಶವಾಗಿರುವುದರಿಂದ ಒಳಗಿರುವವರು ಯಾರೂ ಬದುಕುಳಿದಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments