Webdunia - Bharat's app for daily news and videos

Install App

ಏಕಾಏಕಿ ಕಟ್ಟುನಿಟ್ಟಿನ ಲಾಕ್‌ಡೌನ್‌!

Webdunia
ಭಾನುವಾರ, 17 ಏಪ್ರಿಲ್ 2022 (12:24 IST)
ಬೀಜಿಂಗ್ : ಚೀನಾದ ಶಾಂಘೈ ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸರ್ಕಾರ ಜನರನ್ನು ಏಕಾಏಕಿ ಕಟ್ಟುನಿಟ್ಟಿನ ಲಾಕ್ಡೌನ್ಗೆ ತಳ್ಳಿತು.

ಅಲ್ಲಿನ ಜನರು ತಮ್ಮ ಮನೆಗಳಲ್ಲೇ ಕಳೆದ 4 ವಾರಗಳಿಂದ ದೈನಂದಿನ ಆಹಾರ ಸರಬರಾಜಿಗೆ ಕಾಯುತ್ತಿದ್ದಾರೆ. ಆದರೆ ತಿನ್ನಲು ಕುಡಿಯಲು ಏನೂ ಇಲ್ಲದೆ ಹಸಿವಿನಿಂದ ಒದ್ದಾಡುತ್ತಿರುವ ಜನರು ಆತ್ಮಹತ್ಯೆಗೆ ಮುಂದಾಗಿದ್ದಾರೆ.

ಸುಮಾರು ಎರಡುವರೆ ಕೋಟಿ ಜನರು ಶಾಂಘೈ ನಗರದ ತಮ್ಮ ಮನೆಗಳಲ್ಲಿ ಬಂಧಿಯಾಗಿದ್ದಾರೆ. ಲಾಕ್ಡೌನ್ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಕೆಲವರು ಹಸಿವಿನಿಂದ ತಮ್ಮ ಮನೆಗಳಲ್ಲೇ ಪ್ರಾಣ ಬಿಡುವಂತಹ ಪರಿಸ್ಥಿತಿ ಉಂಟಾಗಿದೆ.

ಇದಕ್ಕೆ ಸಾಕ್ಷಿ ಎಂಬಂತೆ ಹಲವಾರು ವೈರಲ್ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅಲ್ಲಿನ ಭಯಾನಕತೆಯ ನಿಜರೂಪವನ್ನು ತೋರಿಸಿದೆ.

ಶಾಂಘೈನಲ್ಲಿ ವ್ಯಕ್ತಿಯೊಬ್ಬ ಕೋವಿಡ್ ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿ ಪೊಲೀಸರನ್ನು ಸಂಪರ್ಕಿಸಲು ಮುಂದಾಗಿದ್ದಾನೆ. ತನ್ನನ್ನು ಬಂಧಿಸುವಂತೆ ಪೊಲೀಸರ ಬಳಿ ಬೇಡಿಕೊಂಡಿದ್ದಾನೆ. ಇದಕ್ಕೆ ಕಾರಣ ಕೇಳಿದರೆ ಕನಿಷ್ಟಪಕ್ಷ ಜೈಲಿನಲ್ಲಾದರೂ ಊಟ ಸಿಗುತ್ತದಲ್ಲಾ ಎಂದು ಉತ್ತರಿಸಿದ್ದಾನೆ. 

ಇತ್ತೀಚೆಗೆ ವೈರಲ್ ಆಗಿದ್ದ ವೀಡಿಯೋವೊಂದರಲ್ಲಿ ಶಾಂಘೈ ನಿವಾಸಿಗಳು ಆಹಾರಕ್ಕಾಗಿ ತಮ್ಮ ಮನೆಗಳಿಂದ ಹೊರಗೆ ಬರದೇ ಕಿಟಕಿಗಳಿಂದ ಕಿರುಚಾಡುತ್ತಿರುವ ದೃಶ್ಯ ಮನಕಲುಕುವಂತಿತ್ತು.

ಇನ್ನೊಂದು ವೀಡಿಯೋದಲ್ಲಿ ಆರೋಗ್ಯ ಕಾರ್ಯಕರ್ತರು ಜನರ ಪ್ರತಿಭಟನೆಯನ್ನು ತಡೆಯಲು ಪ್ರಯತ್ನಿಸಿದಾಗ ನಾವು ಹಸಿವಿನಿಂದ ಸಾಯುತ್ತಿದ್ದೇವೆ ಎಂದು ಚೀರುವುದನ್ನು ವೀಡಿಯೋದಲ್ಲಿ ನೋಡಬಹುದು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments