Webdunia - Bharat's app for daily news and videos

Install App

ನೀರವ್ ಗಡೀಪಾರಾದರೆ ಆತ್ಮಹತ್ಯೆ ಸಾಧ್ಯತೆ!

Webdunia
ಮಂಗಳವಾರ, 10 ಆಗಸ್ಟ್ 2021 (12:10 IST)
ಲಂಡನ್(ಆ.10): ಪಿಎನ್ಬಿ ವಂಚನೆ ಪ್ರಕರಣದಲ್ಲಿ ಭಾರತಕ್ಕೆ ಗಡಿಪಾರು ಭೀತಿ ಎದುರಿಸುತ್ತಿರುವ ವಜ್ರೋದ್ಯಮಿ ನೀರವ್ ಮೋದಿಗೆ, ಈ ಆದೇಶದ ವಿರುದ್ಧ ಖಿನ್ನತೆ ಮತ್ತು ಆತ್ಮಹತ್ಯೆ ಅಪಾಯದ ಅಂಶಗಳಡಿ ಮೇಲ್ಮನವಿ ಸಲ್ಲಿಸಲು ಲಂಡನ್ನ ಹೈಕೋರ್ಟ್ ಅನುಮತಿ ನೀಡಿದೆ.

ಒಂದು ವೇಳೆ ಈ ಮೇಲ್ಮನವಿಯಲ್ಲಿ ನೀಮೋ ವಾದ ಅಂಗೀಕಾರಗೊಂಡರೆ, ಬ್ರಿಟನ್ ಸರ್ಕಾರ, ನೀಮೋನನ್ನು ಭಾರತಕ್ಕೆ ಗಡಿಪಾರು ಮಾಡಲು ನಿರಾಕರಿಸಬಹುದಾಗಿರುತ್ತದೆ.
ಪ್ರಕರಣ ಸಂಬಂಧ ಈಗಾಗಲೇ ನೀಮೋ ಖಿನ್ನತೆಗೆ ಒಳಗಾಗಿದ್ದಾರೆ. ಅಲ್ಲದೆ ಗಡಿಪಾರು ಮಾಡಿದರೆ ನೀಮೋ ಅವರನ್ನು ಇಡಲಾಗುವ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಅಪಾಯ ಎದುರಿಸುತ್ತಿದ್ದಾರೆ. ಹೀಗಾಗಿ ಗಡಿಪಾರಿಗೆ ಅವಕಾಶ ಕೊಡಬಾರದು ಎಂದು ನೀಮೋ ಪರ ವಕೀಲರು ವಾದಿಸಿದ್ದರು. ಇದನ್ನು ಆಲಿಸಿದ ನ್ಯಾ. ಮಾರ್ಟಿನ್ ಚಾಂಬರ್ಲೇನ್, ಎರಡೂ ಅಂಶಗಳು ವಾದಕ್ಕೆ ಅರ್ಹವಾಗಿವೆ. ಜೊತೆಗೆ ನೀಮೋ ಅವರನ್ನು ಆತ್ಮಹತ್ಯೆಯಿಂದ ತಡೆಯುವಂಥ ವ್ಯವಸ್ಥೆ ಇದೆಯೇ ಇಲ್ಲವೇ ಎಂಬ ಅಂಶ ಕೂಡಾ ವಾದದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿ ಗಡಿಪಾರು ಪರ ತೀರ್ಪು ನೀಡಿದ್ದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments