Webdunia - Bharat's app for daily news and videos

Install App

ಭೀಕರ ಅಪಘಾತ : 20ಕ್ಕೂ ಹೆಚ್ಚು ಯಾತ್ರಾರ್ಥಿಗಳ ಸಾವು!

Webdunia
ಮಂಗಳವಾರ, 28 ಮಾರ್ಚ್ 2023 (09:58 IST)
ರಿಯಾದ್ : ಮುಸ್ಲಿಮರ ಪವಿತ್ರ ನಗರ ಮೆಕ್ಕಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸೇತುವೆಯೊಂದರಲ್ಲಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನಲ್ಲಿದ್ದ 20 ಜನರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಬಸ್ನಲ್ಲಿದ್ದ ಇನ್ನೂ ಹಲವರಿಗೆ ಗಾಯಗಳಾಗಿವೆ ಎಂದು ಸೌದಿ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಘಟನೆ ದಕ್ಷಿಣ ಪ್ರಾಂತ್ಯದ ಅಸಿರ್ನಲ್ಲಿ ನಡೆದಿದೆ. ಯಾತ್ರಾರ್ಥಿಗಳನ್ನು ಮೆಕ್ಕಾ ಹಾಗೂ ಮದೀನಾಗೆ ಕರೆದುಕೊಂಡು ಹೋಗುವ ಸಂದರ್ಭ ನಿರಂತರವಾಗಿ ಸವಾಲು ಎದುರಿಸಲಾಗುತ್ತಿದೆ ಎಂಬುದನ್ನು ಈ ಘಟನೆ ಎತ್ತಿ ತೋರಿಸುತ್ತಿದೆ. 

ಇದು ರಂಜಾನ್ನ ಮೊದಲ ವಾರವಾಗಿರುವುದರಿಂದ ಲಕ್ಷಾಂತರ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಇದೀಗ ಸಂಭವಿಸಿರುವ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. 30 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವವರಲ್ಲಿ ಹಲವರು ಬೇರೆ ಬೇರೆ ದೇಶಗಳಿಂದ ಬಂದಿರುವವರು ಎಂಬುದು ತಿಳಿದುಬಂದಿದೆ. ಆದರೆ ಅವರ ಗುರುತುಗಳನ್ನು ಇನ್ನೂ ತಿಳಿಸಲಾಗಿಲ್ಲ.

ಈ ವೇಳೆ ಭಾರೀ ಬೆಂಕಿ ಸಂಭವಿಸಿದ್ದು, ಜನರ ಸಾವಿಗೆ ಕಾರಣವಾಗಿದೆ. 2019ರ ಅಕ್ಟೋಬರ್ನಲ್ಲೂ ಇಂತಹುದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿತ್ತು. ಮದೀನಾ ಬಳಿ ದೊಡ್ಡ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು, ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments