Webdunia - Bharat's app for daily news and videos

Install App

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

Sampriya
ಭಾನುವಾರ, 27 ಜುಲೈ 2025 (10:04 IST)
ವಾಷಿಂಗ್ಟನ್‌: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಾಂಬೋಡಿಯಾ ಮತ್ತು ಥೈಲ್ಯಾಂಡ್ ಗಡಿ ಸಂಘರ್ಷವನ್ನು ಭಾರತ ಮತ್ತು ಪಾಕಿಸ್ತಾನ ಯುದ್ಧಕ್ಕೆ ಹೋಲಿಕೆ ಮಾಡಿದ್ದಾರೆ. 

ಸ್ಕಾಟ್ಲೆಂಡ್‌ಗೆ ಭೇಟಿ ನೀಡುತ್ತಿರುವ ಟ್ರಂಪ್ ಅವರು, ಈ ನಡುವೆ ಸಾಮಾಜಿಕ ಜಾಲತಾಣ ಟ್ರೂತ್‌ನಲ್ಲಿ ಪೋಸ್ಟ್‌ ಮಾಡಿ,  ಕಾಂಬೋಡಿಯಾ ಮತ್ತು ಥೈಲ್ಯಾಂಡ್ ಗಡಿ ಸಂಘರ್ಷ ಕುರಿತು ಉಲ್ಲೇಖಿಸಿ, ಈ ಯುದ್ಧ ಭಾರತ-ಪಾಕ್ ಸಂಘರ್ಷವನ್ನು ನೆನಪಿಸುತ್ತದೆ ಎಂದಿದ್ದಾರೆ.

ಭಾರತ-ಪಾಕ್ ಸಂಘರ್ಷವನ್ನು ಯಶಸ್ವಿಯಾಗಿ ನಿಲ್ಲಿಸಲಾಯಿತು. ಇಲ್ಲಿ ಕೂಡ ಶಾಂತಿಯನ್ನು ಸ್ಥಾಪಿಸಬಹುದು. ಈ ಬೆದರಿಕೆಯಿಂದ ಎರಡೂ ದೇಶಗಳು ಶಾಂತಿ ಮಾತುಕತೆಗೆ ಒಲವು ತೋರುವ ಸಾಧ್ಯತೆಯಿದೆ. ಮುಂದಿನ ಬೆಳವಣಿಗೆಗಳಿಗಾಗಿ ಕಾಯುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಳೆ ಉಭಯ ರಾಷ್ಟ್ರಗಳು ಯುದ್ಧ ನಿಲ್ಲಿಸದಿದ್ದರೆ, ಎರಡೂ ರಾಷ್ಟ್ರಗಳೊಂದಿಗಿನ ಯಾವುದೇ ವ್ಯಾಪಾರ ಒಪ್ಪಂದಗಳ ಮಾಡಿಕೊಳ್ಳುವುದಿಲ್ಲ ಎಂದೂ ಎಚ್ಚರಿಸಿದ್ದಾರೆ.

ಕಾಂಬೋಡಿಯಾ ಮತ್ತು ಥೈಲ್ಯಾಂಡ್ ರಾಷ್ಟ್ರಗಳ ನಾಯಕರೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದು, ತಕ್ಷಣವೇ ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಆಗ್ರಹಿಸಲಾಗಿದೆ. ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ತೀವ್ರ ಸೇನಾ ಸಂಘರ್ಷ ಆರಂಭವಾಗಿದ್ದು, ಕಾಂಬೋಡಿಯಾ ಮೇಲೆ ಥಾಯ್ಲೆಂಡ್ ವಾಯುದಾಳಿ ನಡೆಸುತ್ತಿದೆ.

ಥೈಲ್ಯಾಂಡ್ ಜೊತೆಗಿನ ಯುದ್ಧವನ್ನು ನಿಲ್ಲಿಸುವ ಬಗ್ಗೆ ಕಾಂಬೋಡಿಯಾದ ಪ್ರಧಾನಿಯೊಂದಿಗೆ ಮಾತನಾಡಿದ್ದೇನೆ. ನಮ್ಮ ನಡುವಿನ ಮಾತುಕತೆ ಉತ್ತಮವಾಗಿತ್ತು. ಕಾಂಬೋಡಿಯಾದಂತೆಯೇ ಥೈಲ್ಯಾಂಡ್ ಕೂಡ ತಕ್ಷಣದ ಕದನ ವಿರಾಮ ಮತ್ತು ಶಾಂತಿಯನ್ನು ಬಯಸುತ್ತದೆ ಎಂಬು ಭಾವಿಸುತ್ತೇನೆ. ಮಾತುಕತೆ ನಡೆಸಲಾಗಿದ್ದು, ಕದನ ವಿರಾಮ, ಶಾಂತಿ ಸ್ಥಾಪನೆಯನ್ನು ಶೀಘ್ರದಲ್ಲೇ ನೋಡುವ ವಿಶ್ವಾಸವಿದೆ ಎಂದಿದ್ದಾರೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments