22 ಸೀಟ್ ಗೆಲ್ಲೋ ಸಲುವಾಗಿ ಇಷ್ಟು ಪ್ರಾಣಗಳ ಜೊತೆ ಬಿಜೆಪಿ ಚೆಲ್ಲಾಟ ಆಡ್ತಿದೆ-ಬಿಎಸ್‍ವೈ ಹೇಳಿಕೆಗೆ ಪಾಕ್ ಗರಂ

Webdunia
ಶುಕ್ರವಾರ, 1 ಮಾರ್ಚ್ 2019 (09:54 IST)
ಪಾಕಿಸ್ತಾನ : ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು
 
ಬಿಜೆಪಿ ಗೆಲ್ಲುತ್ತದೆ ಎಂಬ ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿಕೆಗೆ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿದೆ.

ಯಡಿಯೂರಪ್ಪ ಅವರು ಬುಧವಾರ ಚಿತ್ರದುರ್ಗದಲ್ಲಿ, ‘ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ’ ಎಂದು ಹೇಳಿದ್ದರು.

 

ಈ ಹೇಳಿಕೆಯನ್ನು ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ (ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್‌) ಪಕ್ಷ, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿ, ‘22 ಸೀಟ್ ಗೆಲ್ಲೋ ಸಲುವಾಗಿ ಇಷ್ಟು ಪ್ರಾಣಗಳ ಜೊತೆ ಬಿಜೆಪಿ ಚೆಲ್ಲಾಟ ಆಡ್ತಿದೆ. ಯುದ್ಧ ಅನ್ನೋದು ಚುನಾವಣೆಯ ಆಯ್ಕೆನಾ’ ಎಂದು ಪ್ರಶ್ನಿಸಿದೆ. ಅಲ್ಲದೇ ಪಾಕಿಸ್ತಾನದ ಚಾನೆಲ್‍ಗಳಲ್ಲಿ ಕೂಡ ಈ ಕುರಿತು ಡಿಬೇಟ್ ಆಗಿದೆ.

 

ಇದು ಬಿಜೆಪಿ ನಾಯಕರಿಗೆ ತೀವ್ರ ಮುಜುಗರವನ್ನುಂಟುಮಾಡಿದ್ದು, ಈ ಕೂಡಲೇ ಕೇಂದ್ರ ಸಚಿವ ವಿಕೆ ಸಿಂಗ್, ಬಿಎಸ್‍ವೈಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಹಾಗೇ ‘ಬಿಎಸ್‍ವೈ ಹೇಳಿಕೆಯಿಂದ ಭಿನ್ನವಾಗಿರಲು ಬಯಸುತ್ತೇನೆ. ಕೇವಲ ಹೆಚ್ಚುವರಿ ಸೀಟ್ ಗೆಲ್ಲಲು ಇಷ್ಟೆಲ್ಲ ಮಾಡ್ತಿಲ್ಲ. ಇದು ದೇಶವನ್ನು ಕಾಪಾಡಿಕೊಳ್ಳುವ ಕ್ರಮ’ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಯಮತ್ತೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌, ಆರೋಪಿಗಳಿಗೆ ಕಾಲಿಗೆ ಗುಂಡೇಟು

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಆಹಾರ ಅರಸಿ ಬಂದು ನೀರಿದ್ದ ಬಾವಿಗೆ ಬಿದ್ದ ನಾಲ್ಕು ಆನೆಗಳು, ತನ್ನ ಮಗು ರಕ್ಷಣೆಗೆ ತಾಯಿ ಆನೆ ಪರದಾಟ

ಮುಂದಿನ ಸುದ್ದಿ
Show comments