Webdunia - Bharat's app for daily news and videos

Install App

22 ಸೀಟ್ ಗೆಲ್ಲೋ ಸಲುವಾಗಿ ಇಷ್ಟು ಪ್ರಾಣಗಳ ಜೊತೆ ಬಿಜೆಪಿ ಚೆಲ್ಲಾಟ ಆಡ್ತಿದೆ-ಬಿಎಸ್‍ವೈ ಹೇಳಿಕೆಗೆ ಪಾಕ್ ಗರಂ

Webdunia
ಶುಕ್ರವಾರ, 1 ಮಾರ್ಚ್ 2019 (09:54 IST)
ಪಾಕಿಸ್ತಾನ : ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು
 
ಬಿಜೆಪಿ ಗೆಲ್ಲುತ್ತದೆ ಎಂಬ ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿಕೆಗೆ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿದೆ.

ಯಡಿಯೂರಪ್ಪ ಅವರು ಬುಧವಾರ ಚಿತ್ರದುರ್ಗದಲ್ಲಿ, ‘ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ’ ಎಂದು ಹೇಳಿದ್ದರು.

 

ಈ ಹೇಳಿಕೆಯನ್ನು ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ (ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್‌) ಪಕ್ಷ, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿ, ‘22 ಸೀಟ್ ಗೆಲ್ಲೋ ಸಲುವಾಗಿ ಇಷ್ಟು ಪ್ರಾಣಗಳ ಜೊತೆ ಬಿಜೆಪಿ ಚೆಲ್ಲಾಟ ಆಡ್ತಿದೆ. ಯುದ್ಧ ಅನ್ನೋದು ಚುನಾವಣೆಯ ಆಯ್ಕೆನಾ’ ಎಂದು ಪ್ರಶ್ನಿಸಿದೆ. ಅಲ್ಲದೇ ಪಾಕಿಸ್ತಾನದ ಚಾನೆಲ್‍ಗಳಲ್ಲಿ ಕೂಡ ಈ ಕುರಿತು ಡಿಬೇಟ್ ಆಗಿದೆ.

 

ಇದು ಬಿಜೆಪಿ ನಾಯಕರಿಗೆ ತೀವ್ರ ಮುಜುಗರವನ್ನುಂಟುಮಾಡಿದ್ದು, ಈ ಕೂಡಲೇ ಕೇಂದ್ರ ಸಚಿವ ವಿಕೆ ಸಿಂಗ್, ಬಿಎಸ್‍ವೈಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಹಾಗೇ ‘ಬಿಎಸ್‍ವೈ ಹೇಳಿಕೆಯಿಂದ ಭಿನ್ನವಾಗಿರಲು ಬಯಸುತ್ತೇನೆ. ಕೇವಲ ಹೆಚ್ಚುವರಿ ಸೀಟ್ ಗೆಲ್ಲಲು ಇಷ್ಟೆಲ್ಲ ಮಾಡ್ತಿಲ್ಲ. ಇದು ದೇಶವನ್ನು ಕಾಪಾಡಿಕೊಳ್ಳುವ ಕ್ರಮ’ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments