Webdunia - Bharat's app for daily news and videos

Install App

ವಿಶ್ವಸಂಸ್ಥೆಯಲ್ಲಿ UNSC ಸಭೆ ನಡೆಸಿದ ಮೊದಲ ಪಿಎಂ!

Webdunia
ಮಂಗಳವಾರ, 10 ಆಗಸ್ಟ್ 2021 (12:31 IST)
ನವದೆಹಲಿ(ಆ.10): ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ, ಮುಕ್ತ ಚರ್ಚೆಯಲ್ಲಿ ಮಾತನಾಡಿದ ಅಪರೂಪದ ಘಟನೆ ನಡೆದಿದೆ.


ಈ ಸಭೆಯಲ್ಲಿ ಸೋಮವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸಮುದ್ರ ವ್ಯಾಪಾರಕ್ಕೆ ಇರುವ ಅಡೆತಡೆಗಳನ್ನು ನಿವಾರಿಸುವುದು, ಕಡಲ ವಿವಾದಗಳ ಶಾಂತಿಯುತ ಇತ್ಯರ್ಥ ಸೇರಿದಂತೆ ‘ಐದು ತತ್ವ’ಗಳನ್ನು ಪ್ರತಿಪಾದಿಸಿದ್ದಾರೆ. ಈ ತತ್ವಗಳ ಆಧಾರದ ಮೇಲೆ ಸಮುದ್ರ ಭದ್ರತೆ ಸಹಕಾರಕ್ಕೆ ಮಾರ್ಗಸೂಚಿಯನ್ನು ಸಿದ್ಧಪಡಿಸಬಹುದಾಗಿದೆ ಎಂದು ಹೇಳಿದ್ದಾರೆ. ಉಗ್ರರಿಂದ ಎದುರಾಗುವ ಬೆದರಿಕೆ ವಿರುದ್ಧ ಒಗ್ಗಟ್ಟಿನ ಹೋರಾಟಕ್ಕೆ ಕರೆ ನೀಡಿದ್ದಾರೆ.
ಈ ವರ್ಷದ ಜನವರಿ 1ರಿಂದ 2 ವರ್ಷಗಳ ಅವಧಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ‘ತಾತ್ಕಾಲಿಕ ಸದಸ್ಯ ಸ್ಥಾನ’ ಭಾರತಕ್ಕೆ ದೊರೆತಿದೆ. ಭದ್ರತಾ ಮಂಡಳಿ ರಚನೆಯಾದ ನಂತರ 7ನೇ ಬಾರಿ ಭಾರತಕ್ಕೆ ಈ ಸ್ಥಾನ ಲಭಿಸಿದೆ. ಭಾರತದ ಪ್ರಧಾನಿಯೊಬ್ಬರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಅಲಂಕರಿಸಿ ಸಭೆಯನ್ನು ನಡೆಸಿದ್ದು, ದೇಶದ ಇತಿಹಾಸದಲ್ಲೇ ಮೊದಲು. ಈ ಸಭೆಯು ಕಡಲ ಅಪರಾಧ ಮತ್ತು ಅಭದ್ರತೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಹಾಗೂ ಸಮುದ್ರ ವಲಯದಲ್ಲಿ ಸಮನ್ವಯವನ್ನು ಬಲಪಡಿಸುವ ಮಾರ್ಗಗಳ ಮೇಲೆ ಮುಕ್ತ ಚರ್ಚೆ ಮೇಲೆ ಕೇಂದ್ರೀಕೃತವಾಗಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ‘ಸಮುದ್ರ ಭದ್ರತೆ ಬಲವರ್ಧನೆ- ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಒಂದು ದೃಷ್ಟಾಂತ’ ಎಂಬ ವಿಷಯದ ಚರ್ಚೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೋದಿ, ಸಮುದ್ರ ಮಾರ್ಗವನ್ನು ಭಯೋತ್ಪಾದನೆ ಮತ್ತ ಕಡಲ್ಗಳ್ಳತನಕ್ಕಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಾಗರಗಳು ವಿಶ್ವದ ಸಾಮಾನ್ಯ ಪರಂಪರೆ ಆಗಿವೆ ಮತ್ತು ಸಮುದ್ರ ಮಾರ್ಗಗಳು ಅಂತಾರಾಷ್ಟ್ರೀಯ ವ್ಯಾಪಾರದ ಜೀವನಾಡಿಯಾಗಿವೆ ಎಂಬುದನ್ನು ಒತ್ತಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments