Webdunia - Bharat's app for daily news and videos

Install App

ನಿರ್ಬಂಧ ಸಡಿಲಿಸಿದ ಬ್ರಿಟನ್ ಸರ್ಕಾರ

Webdunia
ಶುಕ್ರವಾರ, 8 ಅಕ್ಟೋಬರ್ 2021 (08:33 IST)
ಬ್ರಿಟಿಷ್ ಸರ್ಕಾರ ತನ್ನ ಪಟ್ಟು ಸಡಿಲಿಸಿದ್ದು, ಇಂಗ್ಲೆಂಡ್ಗೆ ಬರಲು ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ಭಾರತದ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್ನಿಂದ ವಿನಾಯಿತಿ ನೀಡಲು ಬ್ರಿಟನ್ ಸರ್ಕಾರ ಕೊನೆಗೂ ಒಪ್ಪಿದೆ.

ಕೋವಿಡ್ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಸರ್ಕಾರ ಭಾರತ ಸೇರಿದಂತೆ ಅನೇಕ ರಾಷ್ಟ್ರಗಳಿಂದ ಪ್ರಯಾಣಿಕರು ಇಂಗ್ಲೆಂಡ್ಗೆ ಆಗಮಿಸುವುದು ಮತ್ತು ಇಂಗ್ಲೆಂಡ್ನಿಂದ ಅಲ್ಲಿಗೆ ತೆರಳುವುದನ್ನು ನಿರ್ಬಂಧಿಸಿತ್ತು. ಇದೀಗ ಇಂಗ್ಲೆಂಡ್ ಸರ್ಕಾರವು ಇಂಗ್ಲೆಂಡಿಗೆ ಬರುವ ಮತ್ತು ಅಲ್ಲಿಂದ ತೆರಳುವವರ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದೆ. ಎರಡು ಡೋಸ್ ಲಸಿಕೆ ಪಡೆದವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿಯಮಗಳಲ್ಲಿ ಸಡಿಲಿಕೆ ಮಾಡಿದೆ.
ಬ್ರಿಟಿಷ್ ಸರ್ಕಾರದ 'ತಾರತಮ್ಯ'ದ ಪ್ರಯಾಣದ ನಿಯಮಗಳಿಗೆ ಪ್ರತಿಕ್ರಿಯೆಯ ಭಾಗವಾಗಿ ಭಾರತವು ಇಂಗ್ಲೆಂಡ್ನಿಂದ ಆಗಮಿಸುವವರಿಗೆ 10 ದಿನದ ಕ್ವಾರಂಟೈನ್ ಕಡ್ಡಾಯಗೊಳಿಸಿದ ಸುಮಾರು ಒಂದು ವಾರದ ನಂತರ, ಲಂಡನ್ನಲ್ಲಿರುವ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರ ಸರ್ಕಾರವು ಭಾರತದಲ್ಲಿ ಎರಡು ಡೋಸ್ ಲಸಿಕೆ ಪಡೆದ ಕೋವಿಶೀಲ್ಡ್ ಪ್ರಮಾಣಪತ್ರವನ್ನು ಪರಿಗಣಿಸಲು ಒಪ್ಪಿಕೊಂಡಿದೆ. ಬ್ರಿಟಿಷ್ ಸರ್ಕಾರದ ಪ್ರಯಾಣ ನಿಯಮಗಳಲ್ಲಿನ ಇತ್ತೀಚಿನ ಬದಲಾವಣೆಗಳು ಅ. 11, ಬೆಳಿಗ್ಗೆ 9:30 ರಿಂದ ಜಾರಿಗೆ ಬರಲಿದೆ.
ಕೋವಿಶೀಲ್ಡ್ ಅಥವಾ ಬ್ರಿಟಿಷ್ ಸರ್ಕಾರ ಅನುಮೋದಿಸಿದ ಮತ್ತೊಂದು ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಅಕ್ಟೋಬರ್ 11 ರಿಂದ ಯಾವುದೇ ಕ್ವಾರಂಟೈನ್ ಇಲ್ಲ' ಎಂದು ಬ್ರಿಟಿಷ್ ಸರ್ಕಾರದ ಗ್ರಾಂಟ್ ಶಾಪ್ಸ್ ಕಳೆದ ಸೋಮವಾರ ಜಾರಿಗೆ ಬಂದ ಹೊಸ ಪ್ರಯಾಣ ನಿಯಮಗಳಲ್ಲಿ ಬದಲಾವಣೆಗಳನ್ನು ಘೋಷಿಸಿದ ನಂತರ ಇಂಗ್ಲೆಂಡ್ನ ಭಾರತದ ರಾಯಭಾರಿ ಅಲೆಕ್ಸ್ ಎಲ್ಲಿಸ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments