ಪ್ರೇಮಿಗಳನ್ನ ಹತ್ಯೆ ಮಾಡಿ ಮೊಸಳೆ ಬಾಯಿಗೆ ಎಸೆದ ಯುವತಿ ಪೋಷಕರು!

Webdunia
ಸೋಮವಾರ, 19 ಜೂನ್ 2023 (11:42 IST)
ಭೋಪಾಲ್ : ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಆಕೆಯ ಪೋಷಕರೇ ಹತ್ಯೆ ಮಾಡಿ ಮೊಸಳೆಗಳಿಗೆ ಎಸೆದ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ.
 
ಆರೋಪಿಗಳು ಹೇಳಿದ ಚಂಬಲ್ ನದಿಯ ಪ್ರದೇಶದಲ್ಲಿ ಹುಡುಕಾಟ ನಡೆಯುತ್ತಿದ್ದು ಇಲ್ಲಿಯವರೆಗೂ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಘಟನೆ ಎರಡು ವಾರಗಳ ಹಿಂದೆ ನಡೆದಿದ್ದು, ಕೆಲವು ಸಂಬಂಧಿಕರ ಜೊತೆ ಸೇರಿ ಆರೋಪಿಗಳು ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಗುಂಡು ಹಾರಿಸಿ ಕೊಂದಿದ್ದಾರೆ. ಬಳಿಕ ನದಿಯಲ್ಲಿ ಮುಳುಗಿಸಿದ್ದಾರೆ. ಪ್ರಕರಣದಲ್ಲಿ ಮರ್ಯಾದ ಹತ್ಯೆಯ ಶಂಕೆ ವ್ಯಕ್ತವಾಗಿದೆ ಎಂದು ಮೊರೆನಾ ಎಸ್ಪಿ ಶೈಲೇಂದ್ರ ಸಿಂಗ್ ಚೌಹಾಣ್ ತಿಳಿಸಿದ್ದಾರೆ. 

ರತನ್ಬಸಾಯಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಶಿವಾನಿ (18) ಪಕ್ಕದ ಗ್ರಾಮದ ಬಲುಪುರ ನಿವಾಸಿ ರಾಧೇಶ್ಯಾಮ್ ತೋಮರ್ (21) ಎಂಬಾತನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಜಾತಿ ಸಮಸ್ಯೆಗಳಿಂದ ಯುವತಿ ಕುಟುಂಬದ ವಿರೋಧವಿತ್ತು ಎನ್ನಲಾಗಿದೆ.

ಜೂನ್ 3 ರಿಂದ ಹುಡುಗ ಮತ್ತು ಹುಡುಗಿ ಇಬ್ಬರೂ ನಾಪತ್ತೆಯಾಗಿದ್ದರು. ರಾಧೇಶ್ಯಾಮ್ ತೋಮರ್ ಅವರ ಕುಟುಂಬವು, ಯುವತಿಯ ಕುಟುಂಬದವರು ಅವರನ್ನು ಕೊಲೆ ಮಾಡಿದ್ದಾರೆ ಎಂದು ಈ ವೇಳೆ ಆರೋಪಿಸಿತ್ತು. ಯುವಕನ ಕುಟುಂಬ ಪೊಲೀಸರಿಗೆ ಕೊಲೆ ಬಗ್ಗೆ ಆರೋಪಿಸಿ ತನಿಖೆ ಮಾಡುವಂತೆ ಮನವಿ ಮಾಡಿದ್ದರೂ, ಆರಂಭದಲ್ಲಿ ಇಬ್ಬರೂ ಬೇರೆಲ್ಲೋ ಹೋಗಿರಬಹುದು ಎಂದು ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ.

ಬಳಿಕ ಪದೇ ಪದೇ ಇದೇ ಆರೋಪವನ್ನು ಮಾಡಿದ ಮೇಲೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಬಳಿಕ ಪೊಲೀಸರು ಯುವತಿಯ ಕುಟುಂಬದವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments