Select Your Language

Notifications

webdunia
webdunia
webdunia
webdunia

ಬಾಂಗ್ಲಾದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆ ನೀಡಿದ್ದ ಅಮೂಲ್ಯ ಕಿರೀಟ ಕಳ್ಳತನ

Prime Minister Narendra Modi

Sampriya

ಢಾಕಾ , ಶುಕ್ರವಾರ, 11 ಅಕ್ಟೋಬರ್ 2024 (14:18 IST)
Photo Courtesy X
ಕಾ: ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಉಡುಗೊರೆಯಾಗಿ ನೀಡಿದ್ದ ಅಮೂಲ್ಯ ಕಿರೀಟ ಕಳವಾಗಿದೆ.

ಸತ್ಖಿರದ ಶ್ಯಾಮನಗರದಲ್ಲಿರುವ ಜೆಶೋರೇಶ್ವರಿ ದೇವಾಲಯದಲ್ಲಿ ಗುರುವಾರ ತಡರಾತ್ರಿ ಕಳ್ಳತನವಾಗಿದೆ. ಅರ್ಚಕರು ದೇವಾಲಯದಿಂದ ಹೊರಟ ಬಳಿಕ ಈ ಕೃತ್ಯವೆಸಗಲಾಗಿದೆ.

ಕಿರೀಟ ಕಾಣೆಯಾಗಿರುವುದನ್ನು ದೇವಾಲಯದ ಸ್ವಚ್ಛತಾ ಸಿಬ್ಬಂದಿ ಗಮನಿಸಿದ್ದರು. ಕಳ್ಳರ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ದಿ ಡೈಲಿ ಸ್ಟಾರ್‌ ಸುದ್ದಿ ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಪ್ರಧಾನಿ ಮೋದಿ ಅವರು 2021 ರಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರ ಸ್ಮರಣಾರ್ಥ, ದೇವಾಲಯಕ್ಕೆ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ಇದು ರಾಜತಾಂತ್ರಿಕವಾಗಿ ಅಷ್ಟೇ ಅಲ್ಲದೆ, ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿಯೂ ಮಹತ್ವ ಹೊಂದಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರಿನಲ್ಲಿ ಸಂಭ್ರಮದ ದಸರಾ: ಮಾವುತರು, ಕಾವಾಡಿಗರ ಕುಟುಂಬದವರಿಗೆ ಶೋಭಾ ಉಪಾಹಾರ ಕೂಟ