Webdunia - Bharat's app for daily news and videos

Install App

ಬಾಂಗ್ಲಾದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆ ನೀಡಿದ್ದ ಅಮೂಲ್ಯ ಕಿರೀಟ ಕಳ್ಳತನ

Sampriya
ಶುಕ್ರವಾರ, 11 ಅಕ್ಟೋಬರ್ 2024 (14:18 IST)
Photo Courtesy X
ಕಾ: ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಉಡುಗೊರೆಯಾಗಿ ನೀಡಿದ್ದ ಅಮೂಲ್ಯ ಕಿರೀಟ ಕಳವಾಗಿದೆ.

ಸತ್ಖಿರದ ಶ್ಯಾಮನಗರದಲ್ಲಿರುವ ಜೆಶೋರೇಶ್ವರಿ ದೇವಾಲಯದಲ್ಲಿ ಗುರುವಾರ ತಡರಾತ್ರಿ ಕಳ್ಳತನವಾಗಿದೆ. ಅರ್ಚಕರು ದೇವಾಲಯದಿಂದ ಹೊರಟ ಬಳಿಕ ಈ ಕೃತ್ಯವೆಸಗಲಾಗಿದೆ.

ಕಿರೀಟ ಕಾಣೆಯಾಗಿರುವುದನ್ನು ದೇವಾಲಯದ ಸ್ವಚ್ಛತಾ ಸಿಬ್ಬಂದಿ ಗಮನಿಸಿದ್ದರು. ಕಳ್ಳರ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ದಿ ಡೈಲಿ ಸ್ಟಾರ್‌ ಸುದ್ದಿ ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಪ್ರಧಾನಿ ಮೋದಿ ಅವರು 2021 ರಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರ ಸ್ಮರಣಾರ್ಥ, ದೇವಾಲಯಕ್ಕೆ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ಇದು ರಾಜತಾಂತ್ರಿಕವಾಗಿ ಅಷ್ಟೇ ಅಲ್ಲದೆ, ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿಯೂ ಮಹತ್ವ ಹೊಂದಿದೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments