Webdunia - Bharat's app for daily news and videos

Install App

ದುರ್ಗಾ ಪೂಜೆ ಮಾಡಬೇಕೆಂದರೆ 3.5 ಲಕ್ಷ ಕಪ್ಪ ಕೊಡುವಂತೆ ಹಿಂದೂಗಳಿಗೆ ಬೆದರಿಕೆ

Krishnaveni K
ಬುಧವಾರ, 25 ಸೆಪ್ಟಂಬರ್ 2024 (10:08 IST)
ಢಾಕಾ: ಇನ್ನೇನು ದಸರಾ ಬರುತ್ತಿದ್ದು, ಬಾಂಗ್ಲಾದೇಶದಲ್ಲಿರುವ ಹಿಂದೂಗಳು ದಸರಾ ಹಬ್ಬ ಮಾಡುವ ಸಂಭ್ರಮದಲ್ಲಿದ್ದರು. ಆದರೆ ಅವರ ಕನಸಿಗೆ ಈಗ ಬೆದರಿಕೆಯ ಕರಿಛಾಯೆ ಎದುರಾಗಿದೆ.

ಬಾಂಗ್ಲಾದೇಶದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು, ಇವರ ಮೇಲೆ ನಿರಂತರವಾಗಿ ದಾಳಿ, ದಬ್ಬಾಳಿಕೆ ನಡೆಯುತ್ತಲೇ ಇರುತ್ತದೆ. ಹಿಂದೂಗಳ ಮೇಲೆ ಆಗುತ್ತಿರುವ ದಾಳಿ ನಿಯಂತ್ರಿಸುವುದೇ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ದುರ್ಗಾ ಪೂಜೆಗೂ ಸಂಕಷ್ಟ ಎದುರಾಗಿದೆ.

ಒಂದೆಡೆ ಹಿಂದೂಗಳು ದುರ್ಗಾ ಪೂಜೆಗೆ ತಯಾರಿ ನಡೆಸುತ್ತಿದ್ದರೆ, ದುರ್ಗಾ ಪೂಜೆ ಸಂಘಟಕರಿಗೆ ಪೂಜೆ ಮಾಡಬೇಕೆಂದರೆ ನಮಗೆ 3.5 ಲಕ್ಷ ರೂ. ಕೊಡಬೇಕು, ಇಲ್ಲದೇ ಹೋದರೆ ದುರ್ಗಾ ಪೂಜೆ ಮಾಡಲು ಬಿಡಲ್ಲ. ನಮ್ಮ ಅಣತಿ ಮೀರಿ ಮಾಡಿದರೆ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ. ಪೊಲೀಸರಿಗೆ ತಿಳಿಸಿದರೆ ಪರಿಣಾಮ ಚೆನ್ನಾಗಿರಲ್ಲ ಎಂದು ಬೆದರಿಕೆ ಪತ್ರಗಳು ಬರುತ್ತಲೇ ಇವೆ.

ಇದು ಹಿಂದೂಗಳನ್ನು ಚಿಂತೆಗೀಡು ಮಾಡಿದೆ. ಇದುವರೆಗೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾದ ದಾಳಿ, ಕೊಲೆ, ಹಲ್ಲೆಗಳಿಗೆ ಸೂಕ್ತ ರೀತಿಯ ಶಿಕ್ಷೆಯಾಗಿಯೇ ಇಲ್ಲ. ಹೀಗಾಗಿ ಹಿಂದೂಗಳಿಗೆ ಇಲ್ಲಿ ರಕ್ಷಣೆಯೇ ಇಲ್ಲ ಎಂಬ ಪರಿಸ್ಥಿತಿಯಿದೆ. ಹೀಗಿರುವಾಗ ಬೆದಿಕೆ ಪತ್ರಗಳನ್ನು ಮೀರಿ ದುರ್ಗಾ ಪೂಜೆ ಮಾಡುವುದು ಹೇಗೆ ಎಂಬ ಭಯಕ್ಕೆ ಬಿದ್ದಿರುವ ಕೆಲವು ಸಂಘಟನೆಗಳು ಪೂಜೆಯನ್ನೇ ರದ್ದು ಮಾಡುವ ತೀರ್ಮಾನಕ್ಕೆ ಬಂದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments