ಮತ್ತೊಮ್ಮೆ ಟಿಕ್‍ಟಾಕ್ ಬ್ಯಾನ್!

ಅಶ್ಲೀಲ ವಿಡಿಯೋ; ಮತ್ತೊಮ್ಮೆ ಟಿಕ್ಟಾಕ್ ಬ್ಯಾನ್ ಮಾಡಿದ ಪಾಕಿಸ್ತಾನದ ಸಿಂಧ್ ಹೈ ಕೋರ್ಟ್

Webdunia
ಶನಿವಾರ, 3 ಜುಲೈ 2021 (09:50 IST)
Tiktak : ಆ್ಯಪ್ ಮೇಲಿನ ನಿಷೇಧವನ್ನು ತೆಗೆದುಹಾಕುವ ಮನವಿಯನ್ನು ಹೈಕೋರ್ಟ್ ಅಂಗೀಕರಿಸಿದ್ದು, ಜುಲೈ 8ರಂದು ಮುಂದಿನ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ಪಾಕಿಸ್ತಾನದಲ್ಲಿ ಟಿಕ್ಟಾಕ್ ಬ್ಯಾನ್ ಮಾಡುವಂತೆ ಸೂಚನೆ ನೀಡಲಾಗಿದೆ.

 
ಚೀನಾದ ಜನಮೆಚ್ಚುಗೆ ಪಡೆದಿದ್ದ ಟಿಕ್ಟ್ಯಾಕ್ ಆ್ಯಪ್ ಮೇಲೆ ಎರಡನೇ ಬಾರಿ ನಿಷೇಧ ಹೇರಿ ಪಾಕಿಸ್ತಾನದ ಉನ್ನತ ನ್ಯಾಯಾಲಯ ಆದೇಶ ನೀಡಿದೆ. ಟಿಕ್ಟಾಕ್ ಆ್ಯಪ್ ದೇಶದಲ್ಲಿ ಅನೈತಿಕತೆ ಮತ್ತು ಅಶ್ಲೀಲತೆ ಹರಡುತ್ತಿದೆ ಹರಡಲಾಗಿತ್ತಿದೆ ಎಂದು ಈ ಹಿಂದೆ ನಾಗರೀಕರು ನೀಡಿದ್ದ ದೂರಿನ ಹಿನ್ನಲೆ ಈ ಚೀನಾದ ಟಿಕ್ಟಾಕ್ ಆ್ಯಪ್ ಅನ್ನು ನಿಷೇಧಿಸಲಾಗಿಜe. ಈ ಆದೇಶವನ್ನು ಪುನಃ ಪರಿಶೋಲಿಸಿ ಈ ಆ್ಯಪ್ ಅನ್ನು ಸೇವೆಯನ್ನು ಪುನಃ ಸ್ಥಾಪಿಸಲು ಅವಕಾಶ ನೀಡುವಂತೆ ಸಲ್ಲಿಕೆಯಾದ ಅರ್ಜಿ ವಿಚಾರಣೆ ನಡೆಸಿದ ಸಿಂಧ್ ಹೈ ಕೋರ್ಟ್ ವಿಚಾರಣೆ ಮುಗಿಯುವವರೆಗೂ ದೇಶದಲ್ಲಿ ಟಿಕ್ಟಾಕ್ ಆ್ಯಪ್ ಅನ್ನು ನಿಷೇಧಿಸುವಂತೆ ಪಾಕಿಸ್ತಾನ ಟೆಲಿಕಮ್ಯೂನಿಕೆಷನ್ ಅಥಾರಿಟಿಗೆ ತಿಳಿಸಿತು

ಈ ಕುರಿತು ನ್ಯಾಯಾಲಯಕ್ಕೆ ತಿಳಿಸಿರುವ ಪಾಕಿಸ್ತಾನ ಟೆಲಿಕಮ್ಯೂನಿಕೆಷನ್ ಅಥಾರಿಟಿ, ಈ ಅಪ್ಲಿಕೇಶನ್ನ್ನು ಈಗಾಗಲೇ ನಿರ್ಬಂಧಿಸಲಾಗಿದೆ. ಈ ಕುರಿತು ನ್ಯಾಯಾಲಯ ನೀಡಿರುವ ಆದೇಶವನ್ನು ಪರಿಶೀಲಿಸಲು ಮತ್ತು ಸೇವೆಗಳನ್ನು ಪುನಃಸ್ಥಾಪಿಸಲು ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದೆ. ಟಿಕ್ ಟಾಕ್ ಅಶ್ಲೀಲ ವಿಡಿಯೋಗಳನ್ನು ನಿಯಂತ್ರಣ ಮಾಡಿ. ತೃಪ್ತಿದಾಯಕ ಕಾರ್ಯವಿಧಾನವನ್ನು ಅಳವಡಿಸಿಕೊಂಡರೆ ತಮ್ಮ ನಿರ್ಧಾರವನ್ನು ಪರಿಶೀಲಿಸುವುದಾಗಿ  ಪಾಕ್ ಟೆಲಿಕಾಂ ಅಥಾರಿಟಿ ತಿಳಿಸಿದೆ.

ಆ್ಯಪ್ ಮೇಲಿನ ನಿಷೇಧವನ್ನು ತೆಗೆದುಹಾಕುವ ಮನವಿಯನ್ನು ಹೈಕೋರ್ಟ್ ಅಂಗೀಕರಿಸಿದ್ದು, ಜುಲೈ 8ರಂದು ಮುಂದಿನ ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ಪಾಕಿಸ್ತಾನದಲ್ಲಿ ಟಿಕ್ಟಾಕ್ ಬ್ಯಾನ್ ಮಾಡುವಂತೆ ಸೂಚನೆ ನೀಡಲಾಗಿದೆ.

ಪಾಕಿಸ್ತಾನದಲ್ಲಿ ಎರಡು ಬಾರಿ ಈ ಟಿಕ್ಟ್ಯಾಕ್ ಆ್ಯಪ್ ಮೇಲೆ ನಿಷೇಧವನ್ನು ಹೇರಲಾಗಿತ್ತು. ಈ ವರ್ಷದ ಮಾರ್ಚ್ನಲ್ಲಿ ಪೇಶಾವರ ಹೈ ಕೋರ್ಟ್ ಈ ಆ್ಯಪ್ನ್ನು ನಿಷೇಧಿಸುವ ಕುರಿತು ಆದೇಶಿಸಿತ್ತು. ಹಿಂದಿನ ವರ್ಷದ ಅಕ್ಟೋಬರ್ನಲ್ಲಿಯೂ ಸುಮಾರು 10 ದಿನ ಟಿಕ್ ಟಾಕ್ ಬ್ಯಾನ್ ಆಗಿತ್ತು. ಈ ಆ್ಯಪ್ನಲ್ಲಿ ಸಲಿಂಗ ಕಾಮದ ವಿಷಯ ಪ್ರಸಾರ ವಾಗುತ್ತಿರುವ ಹಿನ್ನಲೆ ಅನೇಕ ವಿರೋಧಗಳು ಕೂಡ ವ್ಯಕ್ತವಾಗಿದ್ದವು. ಅಲ್ಲದೇ ಪಾಶ್ಚತ್ಯ ಉಡುಪುಗಳು ಪೋಸ್ಟ್ಗಳಿಗೂ ಇದರಲ್ಲಿ ವಿರೋಧ ವ್ಯಕ್ತವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments