Webdunia - Bharat's app for daily news and videos

Install App

ದುರಂತ : ಚಿನ್ನದ ಗಣಿ ಕುಸಿದು 15 ಕಾರ್ಮಿಕರು ಸಾವು!

Webdunia
ಬುಧವಾರ, 5 ಏಪ್ರಿಲ್ 2023 (08:08 IST)
ಕೇಪ್ಟೌನ್ : ಪೂರ್ವ ಆಫ್ರಿಕಾದ ಬುರುಂಡಿಯಲ್ಲಿ ಚಿನ್ನದ ಗಣಿ ಕುಸಿದು ಹದಿನೈದು ಕಾರ್ಮಿಕರು ಬಲಿಯಾಗಿದ್ದಾರೆ. ಸಿಬಿಟೋಕ್ ಪ್ರಾಂತ್ಯದ ಮಾಬಾಯಿ ಕಮ್ಯೂನ್ನಲ್ಲಿ ಈ ದುರಂತ ನಡೆದಿದೆ.

ಭಾರೀ ಮಳೆಯಿಂದಾಗಿ ಚಿನ್ನದ ಗಣಿಯಲ್ಲಿ ನೀರು ತುಂಬಿಕೊಂಡಿತ್ತು. ಕೆಲಸ ಮಾಡುತ್ತಿದ್ದಾಗ ಗಣಿ ಕುಸಿದು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿ 15 ಮಂದಿ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ತಿಳಿದ ನಂತರ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. 

ಮಳೆ ಕಾರಣಕ್ಕೆ ರುಗೊಗೊ ನದಿ ಉಕ್ಕಿ ಹರಿದು ಚಿನ್ನದ ಗಣಿಯಲ್ಲಿ ನೀರು ತುಂಬಿಕೊಂಡಿತ್ತು. ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕ ಕಾರ್ಮಿಕರು ಹೊಂಡಗಳಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಹೊರ ಕರೆತರುವಲ್ಲಿ ರಕ್ಷಣಾ ತಂಡಕ್ಕೆ ಸಾಧ್ಯವಾಗಿಲ್ಲ. ನಂತರ ಕಾರ್ಮಿಕರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments