Webdunia - Bharat's app for daily news and videos

Install App

ಭಾರತದಲ್ಲಿರುವ ಶೇಖ್ ಹಸೀನಾಗೆ ಮತ್ತೆ ಸಂಕಷ್ಟ: ಕೋರ್ಟ್‌ನಿಂದ ಬಂಧನ ವಾರೆಂಟ್ ಜಾರಿ

Sampriya
ಗುರುವಾರ, 17 ಅಕ್ಟೋಬರ್ 2024 (15:26 IST)
Photo Courtesy X
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್​ ಹಸೀನಾ ವಿರುದ್ಧ ಅಲ್ಲಿನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ.

ಆಗಸ್ಟ್ 5 ರಂದು ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ತಮ್ಮ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಬಂದಿದ್ದರು.

ಶೇಖ್ ಹಸೀನಾ ಅವರಿಗೆ ಈಗ ಸಂಕಷ್ಟ ಹೆಚ್ಚಿದೆ. ಬಾಂಗ್ಲಾದೇಶದ ನ್ಯಾಯಾಲಯ ಅರೆಸ್ಟ್​ ವಾರೆಂಟ್ ಹೊರಡಿಸಿದೆ. ಬಾಂಗ್ಲಾದೇಶ ನ್ಯಾಯಾಲಯವು ಶೇಖ್ ಹಸೀನಾ ವಿರುದ್ಧ ಇಂದು ಅಕ್ಟೋಬರ್ 17 ಗುರುವಾರ ಬಂಧನ ವಾರಂಟ್ ಹೊರಡಿಸಿದೆ.

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್‌ನ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ತಾಜುಲ್ ಇಸ್ಲಾಂ ಈ ಬಂಧನ ವಾರಂಟ್ ಕುರಿತು ಮಾಹಿತಿ ನೀಡಿದರು.

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯ ಮಂಡಳಿಯಲ್ಲಿ ಬಾಂಗ್ಲಾ ಪರ ವಕಾಲತ್ತು ವಹಿಸುವ ವಕೀಲ ಮೊಹಮ್ಮದ್‌ ತಾಜುಲ್‌ ಇಸ್ಲಾಂ ಇದೀಗ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಆ ಪ್ರಕಾರ ಶೇಖ್‌ ಹಸೀನಾ ಅವರನ್ನು ಭಾರತದಿಂದ ವಾಪಸ್‌ ಕರೆಯಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಸೀನಾ ಜೊತೆ ಬಾಂಗ್ಲಾದೇಶ ಬಿಟ್ಟು ಓಡಿ ಹೋದ ಎಲ್ಲರನ್ನೂ ಕರೆಸಿಕೊಳ್ಳುತ್ತೇವೆ ಎಂದಿದ್ದಾರೆ ತಾಜುಲ್‌ ಇಸ್ಲಾಂ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments