Webdunia - Bharat's app for daily news and videos

Install App

ತುರ್ಕಿಸ್ತಾನ್ ಅಧ್ಯಕ್ಷ ಎರ್ಡೊಗನ್‌ರಿಂದ ತುರ್ತುಪರಿಸ್ಥಿತಿ ಘೋಷಣೆ

Webdunia
ಗುರುವಾರ, 21 ಜುಲೈ 2016 (13:01 IST)
ಕಳೆದ ಜುಲೈ 15 ರಂದು ನಡೆದ ವಿಫಲ ಸಿಪಾಯಿ ದಂಗೆಯ ನಂತರ ತುರ್ಕಿಸ್ತಾನ ದೇಶದ ಅಧ್ಯಕ್ಷ ರೆಸೆಪ್   ಎರ್ಡೊಗನ್ ದೇಶಾದ್ಯಂತ ಮೂರು ತಿಂಗಳುಗಳ ಕಾಲ ತುರ್ತುಪರಿಸ್ಥಿತಿಯನ್ನು ಹೇರಿ ಆದೇಶ ಹೊರಡಿಸಿದ್ದಾರೆ. 
 
ದೇಶಾದ್ಯಂತ ಮೂರು ತಿಂಗಳುಗಳವರೆಗೆ ತುರ್ತುಪರಿಸ್ಥಿ ಹೇರುವ ಬಗ್ಗೆ ಇಂದು ನಡೆದ ರಾಷ್ಟ್ರೀಯ ಭಧ್ರತಾ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರಪತಿ ಭವನದ ಅಧಿಕಾರಿಗಳು ತಿಳಿಸಿದ್ದಾರೆ.
 
ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿರುವುದು ಪ್ರಜಾಪ್ರಭುತ್ವ, ಕಾನೂನು ಮತ್ತು ಸ್ವಾತಂತ್ರ್ಯದ ವಿರುದ್ಧವಲ್ಲ. ಭಯೋತ್ಪಾದನೆಯ ವಿರುದ್ಧವಾಗಿದೆ. ಜನತೆಯ ಆಶೋತ್ತರಗಳಿಗೆ ಸರಕಾರ ಸದಾ ಬದ್ಧವಾಗಿದೆ ಎಂದು ರಾಷ್ಟ್ರಪತಿ ಎರ್ಡೊಗನ್ ಹೇಳಿದ್ದಾರೆ.
 
ದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಚಟುವಟಿಕೆಗಳನ್ನು ನಿಗ್ರಹಿಸಲು ಮತ್ತು ನಮ್ಮ ದೇಶದ ಜನರ ಹಕ್ಕುಗಳನ್ನು ರಕ್ಷಿಸಲು ಮತ್ತು ದೇಶದಲ್ಲಿ ಸಂವಿಧಾನವನ್ನು ಪ್ರಬಲವಾಗಿ ಜಾರಿಗೆ ತರಲು ತುರ್ತುಪರಿಸ್ಥಿತಿ ಜಾರಿ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
 
ದೇಶದ ಜನತೆ ಯಾವುದೇ ರೀತಿಯ ಆತಂಕಪಡುವುದು ಬೇಡ. ಆರ್ಥಿಕ ಸುಧಾರಣೆ ಸೇರಿದಂತೆ ಪ್ರತಿಯೊಂದು ವಿಷಯಗಳಲ್ಲು ಸರಕಾರ ಅಗತ್ಯವಾದ ಕ್ರಮಗಳನ್ನು ಕೈಗೊಂಡಿದೆ ಎಂದು ತುರ್ಕಿಸ್ತಾನ್ ಅಧ್ಯಕ್ಷ ಎರ್ಡೊಗನ್ ಆಶ್ವಾಸನೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments