ಸ್ಥಳೀಯನನ್ನು ಕೊಂದಿದ್ದಕ್ಕೆ ಮೊಸಳೆಗಳ ಮೇಲೆ ಸೇಡು ತೀರಿಸಿಕೊಂಡ ಗ್ರಾಮಸ್ಥರು

Webdunia
ಮಂಗಳವಾರ, 17 ಜುಲೈ 2018 (12:01 IST)
ಇಂಡೊನೆಷಿಯಾ : ಸ್ಥಳೀಯನೊರ್ವನನ್ನು ಮೊಸಳೆಯೊಂದು ಕೊಂದು ಹಾಕಿದ್ದಕ್ಕೆ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ನಿರ್ದಯವಾಗಿ ಮೊಸಳೆಗಳ ಮೇಲೆ ಸೇಡು ತೀರಿಸಿಕೊಂಡ ಘಟನೆ ಪಪುವಾ ಪ್ರಾಂತ್ಯದಲ್ಲಿ ನಡೆದಿದೆ.


ಜಾನುವಾರಿಗೆ ಹುಲ್ಲು ಅರಸುತ್ತಾ ರೈತ ಸುಗಿಟೊ (48) ಆಕಸ್ಮಿಕವಾಗಿ ಮೊಸಳೆ ಪಾಲನಾ ಕೇಂದ್ರದ ಆವರಣದೊಳಕ್ಕೆ ಬಂದಿದ್ದ, ಆಗ ಮೊಸಳೆಯೊಂದು ಆತನ ಕಾಲನ್ನು ಕಚ್ಚಿ, ಬಾಲದಿಂದ ಅಪ್ಪಳಿಸಿ ಕೊಂದು ಹಾಕಿತ್ತು.ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಜನವಸತಿ ಪ್ರದೇಶದಲ್ಲಿ ಮೊಸಳೆ ಪಾಲನಾ ಕೇಂದ್ರ ಇರುವುದನ್ನು ಖಂಡಿಸಿ ಪೊಲೀಸ್‌ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೃತನ ಕುಟುಂಬಕ್ಕೆ ಪರಿಹಾರ ನೀಡಲು ಕೇಂದ್ರ ಒಪ್ಪಿಕೊಂಡಿರುವುದಾಗಿ ಸ್ಥಳೀಯ ವನ ಸಂರಕ್ಷಣಾ ಸಂಸ್ಥೆಯ ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದರು.


ಆದರೂ ಕೂಡ ಇದರಿಂದ ಸಮಾಧಾನಗೊಳ್ಳದ  ಗ್ರಾಮಸ್ಥರು ಚಾಕು, ಪಿಕಾಸಿಯಂತಹ ಆಯುಧಗಳನ್ನು ಹಿಡಿದು ಪಾಲನಾ ಕೇಂದ್ರಕ್ಕೆ ನುಗ್ಗಿ ಅಲ್ಲಿದ್ದ,ಮರಿಗಳನ್ನು ಬಿಡದೆ ಎಲ್ಲಾ ಮೊಸಳೆಗಳನ್ನು ಕೊಚ್ಚಿ ಕೊಂದು ಹಾಕಿದ್ದಾರೆ. ಪೊಲೀಸರು ಮತ್ತು ವನ ಸಂರಕ್ಷಣಾ ಸಂಸ್ಥೆಯ ಅಧಿಕಾರಿಗಳ ಸಂಖ್ಯೆ ಕಡಿಮೆ ಇದ್ದ ಕಾರಣ ಗ್ರಾಮಸ್ಥರ ಗುಂಪನ್ನು ತಡೆಯಲು ಸಾಧ್ಯವಾಗಲಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಗ್ರಾಮಸ್ಥರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ಮುಂದಿನ ಸುದ್ದಿ
Show comments