Webdunia - Bharat's app for daily news and videos

Install App

ಯುದ್ಧ: ರಷ್ಯಾದಿಂದ ಹೊರನಡೆದ ಇನ್ಫೋಸಿಸ್!?

Webdunia
ಗುರುವಾರ, 14 ಏಪ್ರಿಲ್ 2022 (06:47 IST)
ಮಾಸ್ಕೋ : ಉಕ್ರೇನ್ನೊಂದಿಗಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ಇನ್ಫೋಸಿಸ್ ಲಿಮಿಟೆಡ್ ಕಂಪನಿ ರಷ್ಯಾದಿಂದ ಹೊರನಡೆದಿದೆ.

ಯುದ್ಧದ ಕಾರಣದಿಂದ ಇನ್ಫೋಸಿಸ್ ರಷ್ಯಾದಲ್ಲಿದ್ದ ತನ್ನ ವ್ಯವಹಾರಗಳನ್ನು ಸ್ಥಳಾಂತರಿಸುತ್ತಿದ್ದು, ಪರ್ಯಾಯ ಆಯ್ಕೆಯನ್ನು ಹುಡುಕುತ್ತಿದೆ ಎಂದು ತಿಳಿಸಿದೆ.

ಒರಾಕಲ್ ಹಾಗೂ ಸ್ಯಾಪ್ ಸೇರಿದಂತೆ ಹಲವಾರು ಇತರ ಐಟಿ ಹಾಗೂ ಸಾಫ್ಟ್ವೇರ್ ಕಂಪನಿಗಳು ರಷ್ಯಾದಲ್ಲಿ ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಿವೆ. ಇದೀಗ ಭಾರತದ ಇನ್ಫೋಸಿಸ್ ರಷ್ಯಾವನ್ನು ತೊರೆಯಲು ನಿರ್ಧರಿಸಿದೆ. 

ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಪರಿಣಾಮದ ಕುರಿತು ಪ್ರಶ್ನೆಗೆ ಉತ್ತರಿಸಿದ ಇನ್ಫೋಸಿಸ್ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಲೀಲ್ ಪರೇಖ್, ಪರಿಸ್ಥಿತಿಯನ್ನು ನೋಡಿದಾಗ ನಾವು ನಮ್ಮ ವ್ಯವಹಾರಗಳನ್ನು ರಷ್ಯಾದಿಂದ ಬೇರೆಡೆಗೆ ಬದಲಾಯಿಸಲು ಪ್ರಾರಂಭಿಸಿದ್ದೇವೆ ಎಂದರು.

ರಷ್ಯಾದಲ್ಲಿ ನಮಗೆ ಗ್ರಾಹಕರು ಇಲ್ಲ. ನಾವೀಗ ರಷ್ಯಾದಲ್ಲಿ ಮಾಡುತ್ತಿರುವ ಕೆಲಸಗಳನ್ನು ಜಾಗತಿಕವಾಗಿ ವಿಸ್ತರಿಸಲು ಮುಂದಾಗಿದ್ದೇವೆ. ರಷ್ಯಾ-ಉಕ್ರೇನ್ನ ಸಂಘರ್ಷದ ಬಗ್ಗೆ ನಮಗೆ ಚಿಂತೆ ಇದೆ. ಹೀಗಾಗಿ ನಮ್ಮ ಉದ್ಯೋಗಿಗಳನ್ನು ರಷ್ಯಾದಿಂದ ಇತರ ದೇಶಗಳಿಗೆ, ವಿಶೇಷವಾಗಿ ಪೂರ್ವ ಯುರೋಪ್ಗೆ ಸ್ಥಳಾಂತರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments