ಯುದ್ಧ : ರಷ್ಯಾಗೆ ಆದೇಶ ನೀಡಿದ ಅಂತಾರಾಷ್ಟ್ರೀಯ ಕೋರ್ಟ್ !

Webdunia
ಗುರುವಾರ, 17 ಮಾರ್ಚ್ 2022 (10:13 IST)
ನೆದರ್ಲೆಂಡ್ಸ್ : ಮಹತ್ವದ ಆದೇಶದಲ್ಲಿ, ನೆದರ್ಲ್ಯಾಂಡ್ಸ್ನ ಹೇಗ್ನಲ್ಲಿರುವ ಅಂತರರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಬುಧವಾರ,  ಸಾರ್ವಭೌಮ ರಾಷ್ಟ್ರ ಉಕ್ರೇನ್  ಮೇಲಿನ ಆಕ್ರಮಣವನ್ನು ರಷ್ಯಾ  ತಕ್ಷಣವೇ ನಿಲ್ಲಿಸಬೇಕು ಎಂದು ಸೂಚನೆ ನೀಡಿದೆ.
 
" ಈ ಪ್ರಕರಣದಲ್ಲಿ ಇನ್ನೂ ಅಂತಿಮ ನಿರ್ಧಾರ ಬಾಕಿ ಉಳಿದಿದ್ದು, ರಷ್ಯಾದ ಒಕ್ಕೂಟವು, ಉಕ್ರೇನ್ ದೇಶದ ಮೇಲೆ ಆರಂಭಿಸಿರುವ ಸೇನಾ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು" ಎಂದು ಅದೇಶ ನೀಡಿದೆ.

"ರಷ್ಯಾದ ಒಕ್ಕೂಟವು ಮಿಲಿಟರಿ ಅಥವಾ ಅದು ನಿರ್ದೇಶಿಸುವ ಅಥವಾ ಬೆಂಬಲಿಸುವ ಯಾವುದೇ ಅನಿಯಮಿತ ಸಶಸ್ತ್ರ ಘಟಕಗಳು ಉಕ್ರೇನ್ ನೆಲದಲ್ಲಿ ಇರಬಾರದು ಎಂದು ಹೇಳಿದೆ.

ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವಾಗಿರುವ ಇಂಟರ್ನ್ಯಾಷನಲ್ ಕೋರ್ಟ್ ಆಫ್ ಜಸ್ಟಿಸ್ , ರಷ್ಯಾ ತನ್ನ ಆಕ್ರಮಣವನ್ನು ನಿಲ್ಲಿಸಲು ಉಕ್ರೇನ್ ಮಾಡಿದ ತುರ್ತು ಮನವಿಯ ಮೇಲೆ ಬುಧವಾರ ತೀರ್ಪು ನೀಡಿದೆ.

13-2 ಮತಗಳಿಂದ, ರಷ್ಯಾದ ಒಕ್ಕೂಟವು ಫೆಬ್ರವರಿ 24 ರಂದು ಪ್ರಾರಂಭವಾದ ಮಿಲಿಟರಿ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ತೀರ್ಪು ಹೇಳಿದೆ. ವರದಿಗಳ ಪ್ರಕಾರ, ರಷ್ಯಾ ಮತ್ತು ಚೀನಾದ   ನ್ಯಾಯಾಧೀಶರು ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರು.

"ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ರಷ್ಯಾ ವಿರುದ್ಧದ ಪ್ರಕರಣದಲ್ಲಿ ಉಕ್ರೇನ್ ಸಂಪೂರ್ಣ ಜಯ ಸಾಧಿಸಿದೆ. ಆಕ್ರಮಣವನ್ನು ತಕ್ಷಣವೇ ನಿಲ್ಲಿಸಲು ಐಸಿಜೆ ಆದೇಶ ನೀಡಿದೆ. ಆದೇಶವು ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಬದ್ಧವಾಗಿದೆ. ರಷ್ಯಾ ಇದನ್ನು ಪಾಲಿಸಬೇಕು, ಆದೇಶವನ್ನು ನಿರ್ಲಕ್ಷ್ಯ ಮಾಡಿದಲ್ಲಿ, ರಷ್ಯಾ ವಿಶ್ವದಿಂದ ಮತ್ತಷ್ಟು ಪ್ರತ್ಯೇಕವಾಗಲಿದೆ ಎಂದು ಬರೆದುಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments