Webdunia - Bharat's app for daily news and videos

Install App

ಸಿಕ್ಕಿಂ ಗಡಿಯಲ್ಲಿ ಯುದ್ಧದ ವಾತಾವರಣ!

Webdunia
ಸೋಮವಾರ, 3 ಜುಲೈ 2017 (08:15 IST)
ನವದೆಹಲಿ: ಸಿಕ್ಕಿಂ ಗಡಿಯಲ್ಲಿ ಚೀನಾ ಪಡೆಗಳು ಪದೇ ಪದೇ ಖ್ಯಾತೆ ತೆಗೆಯುತ್ತಿರುವುದರಿಂದ ಕೆರಳಿರುವ ಭಾರತ ತನ್ನ ಯೋಧರನ್ನು ಯುದ್ಧ ಸನ್ನದ್ಧ ರೀತಿಯಲ್ಲಿ ಜಮಾವಣೆ ಮಾಡಿದೆ.

 
1962 ರ ನಂತರ ಈ ಗಡಿ ಭಾಗದಲ್ಲಿ ಭಾರತೀಯ ಸೈನಿಕರನ್ನು ಜಮಾವಣೆ ಮಾಡಿದ್ದು ಇದೇ ಮೊದಲಾಗಿದೆ. 55 ವರ್ಷಗಳ ಹಿಂದೆ ಈ ಗಡಿ ಭಾಗಕ್ಕಾಗಿ ಉಭಯ ದೇಶಗಳ ನಡುವೆ ಯುದ್ಧವೇ ನಡೆದಿತ್ತು. ಇದೀಗ ಮತ್ತೆ ಭಾರೀ ಸಂಖ್ಯೆಯಲ್ಲಿ ಇಲ್ಲಿ ಸೈನಿಕರ ಜಮಾವಣೆ ಮಾಡಲಾಗಿದೆ.

ಕಳೆದ ವಾರ ಚೀನಾ ಪಡೆಗಳು ಭಾರತೀಯ ಸೇನಾ ಬಂಕರ್ ನ್ನು ನಾಶ ಮಾಡಿದ ಮೇಲೆ ಗಡಿಯಲ್ಲಿ ಉದ್ವಿಗ್ನ ವಾತಾವರಣ ಹೆಚ್ಚಿದೆ. ಅಲ್ಲದೆ ಇತ್ತೀಚೆಗೆ ಒನ್ ರೋಡ್, ಒನ್ ಬೆಲ್ಟ್ ಎಂಬ ಚೀನಾದ ಯೋಜನೆಗೆ ಭಾರತ ಕೈಜೋಡಿಸದೇ ಇರುವುದು, ಚೀನಾ-ಪಾಕ್ ಆರ್ಥಿಕ ಕಾರಿಡಾರ್ ಗೆ ಭಾರತದ ನಕಾರಾತ್ಮಕ ಧೋರಣೆ ಆ ದೇಶವನ್ನು ಮತ್ತಷ್ಟು ಕೆರಳಿಸಿದೆ.

ಈ ಹಿನ್ನಲೆಯಲ್ಲಿ ಗಡಿಯಲ್ಲಿ ಮತ್ತಷ್ಟು ತಗಾದೆ ತೆಗೆಯುತ್ತಿದೆ. ಭಾರತ ಸೈನಿಕರನ್ನು ಜಮಾವಣೆ ಮಾಡಿದ ಬೆನ್ನಲ್ಲೇ ಚೀನಾ ಕೂಡಾ ಸಕಲ ಸನ್ನದ್ಧವಾಗಿದೆ ಎಂದು ಚೀನಾ ಮೂಲಗಳು ತಿಳಿಸಿವೆ. ಅಲ್ಲದೆ, ಭಾರತ ಮೊದಲು ತನ್ನ ಸೈನಿಕರನ್ನು ಹಿಂಪಡೆಯಲಿ. ಇಲ್ಲದಿದ್ದರೆ, ಉಭಯ ದೇಶಗಳ ಸಂಬಂಧ ಮತ್ತಷ್ಟು ಹದಗೆಡಬಹುದು ಎಂದು ಚೀನಾ ಎಚ್ಚರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments