Webdunia - Bharat's app for daily news and videos

Install App

ಯುದ್ಧ : ಕೀವ್ ಪ್ರವೇಶಿಸುವಲ್ಲಿ ರಷ್ಯಾ ವಿಫಲ

Webdunia
ಶುಕ್ರವಾರ, 25 ಮಾರ್ಚ್ 2022 (06:49 IST)
ಕೀವ್ : ಉಕ್ರೇನ್ ಮೇಲೆ ರಷ್ಯಾ ಯುದ್ಧ ಆರಂಭಿಸಿ ಇಂದಿಗೆ ಬರೋಬ್ಬರಿ ಒಂದು ತಿಂಗಳು. ಆದರೆ ರಷ್ಯಾ ನಿರೀಕ್ಷಿಸಿದಂತೆ ಯುದ್ಧರಂಗದಲ್ಲಿ ಏನೂ ನಡೆಯುತ್ತಿಲ್ಲ.

ಉಕ್ರೇನ್ ಸೈನಿಕರ ಉಕ್ಕಿನಂತಹ ಸಂಕಲ್ಪದ ಮುಂದೆ ರಷ್ಯಾದ ಆಯುಧ ಶಕ್ತಿಗೂ ಏನೂ ಮಾಡಲು ಆಗ್ತಿಲ್ಲ.

ರಷ್ಯಾ ಸೇನೆಯ ದಾಳಿಯ ಧಾಟಿಗೆ ಹಲವು ನಗರಗಳು ಧ್ವಂಸಗೊಳ್ಳುತ್ತಿದ್ದರೂ, ಉಕ್ರೇನಿಗರ ಆತ್ಮಸ್ಥೈರ್ಯ ಒಂದಿನಿತೂ ಕುಸಿದಿಲ್ಲ. ಈವರೆಗೂ ರಾಜಧಾನಿ ಕೀವ್ ಅನ್ನು ಪ್ರವೇಶಿಸಲು ರಷ್ಯಾ ಪಡೆಗಳಿಗೆ ಆಗಿಲ್ಲ. ಈ ಹೊತ್ತಲ್ಲಿ ಹೊರಗೆ ಬಂದಿರುವ ಒಂದು ಕಥನ ಉಕ್ರೇನಿಗರ ಧೈರ್ಯ ಸಾಹಸಗಳನ್ನು ಅನಾವರಣ ಮಾಡಿದೆ. 

ಉಕ್ರೇನ್ನ ಸಣ್ಣ ಪಟ್ಟಣ ವೋಜ್ನೇ-ಸೇನ್ಸ್ಕ್. ರಷ್ಯಾ ಸೇನೆ ಎರಡು ವಾರ ಘನಘೋರ ಯುದ್ಧ ಮಾಡಿದರೂ ಇಲ್ಲಿನ ಪ್ರಮುಖ ಸೇತುವೆ ಮೇಲೆ ಹಿಡಿತ ಸಾಧಿಸಲು ಆಗಲಿಲ್ಲ. ಉಕ್ರೇನ್ ಸೈನಿಕರು ಮತ್ತು ಸ್ಥಳೀಯರ ವಿರೋಚಿತ ಹೋರಾಟದ ಮುಂದೆ ರಷ್ಯಾ ಸೇನೆಯ ಆಟ ನಡೆದಿಲ್ಲ.

ಆ ಸೇತುವೆಯನ್ನೇ ಉಡೀಸ್ ಮಾಡಿದ ಉಕ್ರೇನ್ ಜನತೆ, ರಷ್ಯಾದ ಸೈನಿಕರನ್ನು ಸುಮಾರು 100 ಕಿಲೋಮೀಟರ್ ಹಿಂದಕ್ಕೆ ಅಟ್ಟಾಡಿಸಿಕೊಂಡು ಹೋಗಿದ್ರು. ಈ ಹೋರಾಟ ನಡೆದು ಮೂರು ವಾರ ಕಳೆದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments